ಗ್ರಾಮದ ಅಭಿವೃದ್ಧಿಗೆ ಶ್ರಮಿಸಲು ಕರೆ

ಗ್ರಾಮದ ಅಭಿವೃದ್ಧಿಗೆ ಶ್ರಮಿಸಲು ಕರೆ

ರಾಮದುರ್ಗ : ತಾಲೂಕಿನ 11 ಲಂಬಾಣಿ ತಾಂಡಾಗಳ ಅಭಿವೃದ್ಧಿಗೆ ಪ್ರತಿ ತಾಂಡಾಕ್ಕೆ ರೂ. 40 ಲಕ್ಷದಂತೆ ಬಂಜಾರ ಅಭಿವೃದ್ಧಿ ನಿಗಮದ ಮೂಲಕ ರೂ. 11 ಕೋಟಿ 40 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ತಾಲೂಕಿನ ಆರಿಬೆಂಚಿ ತಾಂಡಾದಲ್ಲಿ ರೂ. 22 ಲಕ್ಷ ಅನುದಾನದಲ್ಲಿ ಸರ್ಕಾರಿ ಶಾಲಾ ನೂತನ ಕಟ್ಟಡ ನಿರ್ಮಾಣ ಮತ್ತು ರೂ. 38 ಲಕ್ಷ ವೆಚ್ಚದಲ್ಲಿ ಆರಿಬೆಂಚಿ ತಾಂಡಾದಿಂದ ಬನ್ನೂರ ತಾಂಡಾ ವರೆಗೆನ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಅನುದಾನ ಬಳಕೆ ಮಾಡಿಕೊಂಡು ಗ್ರಾಮಗಳ ಅಭಿವೃದ್ಧಿಪಡಿಸಿಕೊಳ್ಳಬೇಕು ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ ಮಾಡಿ ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿಸಿಕೊಳ್ಳಬೇಕು ಎಂದರು.

ಸರ್ಕಾರ ಗ್ರಾಮಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನದಲ್ಲಿ ನಡೆಯುವ ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಸಮರ್ಪಕ ಉಸ್ತುವಾರಿ ಮಾಡಿದರೆ ಮಾತ್ರ ಉತ್ತಮ ಕಾಮಗಾರಿ ಆಗಲು ಸಾಧ್ಯವಿದೆ ಎಂದು ಹೇಳಿದರಲ್ಲದೆ ಕಳಪೆ ಕಾಮಗಾರಿ ನಡೆದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಹೊಣೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Related