ಬಿಂದು ಗೌಡ ವಿರುದ್ಧ ಪ್ರಕರಣ ದಾಖಲು

ಬಿಂದು ಗೌಡ ವಿರುದ್ಧ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಚಿತ್ರವನ್ನು ಮಹಿಳೆಗೆ ಹೋಲಿಸಿ ಫೇಸ್ ಬುಕ್‌ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.
ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಂದುಗೌಡ ವಿರುದ್ಧ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಕೆಪಿಸಿಸಿಯ ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಂದುಗೌಡ ವಿರುದ್ಧ ಐಟಿ ಆಕ್ಟ್ 2008ರ ಅಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಚಿವರ ಗೌರವ, ಘನತೆಗೆ ಕುಂದನ್ನುಂಟು ಮಾಡಿದ್ದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ದೂರು ನೀಡಿದ್ದಾರೆ.

ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದಿಂದ ಸುಧಾಕರ್ ಅವರಿಗೆ ಭಾರಿ ಗೌರವ ಪೂರಕ ಅಭಿನಂದನೆ ಎಂದು ಬರೆದು ಬಿಂದು ಗೌಡ ಫೇಸ್ ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಕೊರೋನಾ ಕಾರಣದಿಂದ ಥಿಯೇಟರ್ ಗಳಿಗೆ ಹೇರಿದ್ದ ನಿಯಮಾವಳಿಗಳನ್ನು ಸಡಿಲಗೊಳಿಸಿದ ಕಾರಣ ಈ ರೀತಿ ಪೋಸ್ಟ್ ಹಂಚಿಕೊಂಡಿದ್ದರು. ಆದರೆ, ಪೋಸ್ಟ್ ನಲ್ಲಿ ಆರೋಗ್ಯ ಸಚಿವ ಸುಧಾಕರ್‌ರನ್ನು ಹುಡುಗಿಯಂತೆ ತೋರಿಸುವ, ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಅದರ ವಿರುದ್ಧ ಈಗ ದೂರು ದಾಖಲಾಗಿದೆ.

Related