ಕರವೇ ರಾಜ್ಯ ಸಂಘಟನಾ ಕಾರ್ಯದಶಿ ಆಯ್ಕೆ

ಕರವೇ ರಾಜ್ಯ ಸಂಘಟನಾ ಕಾರ್ಯದಶಿ ಆಯ್ಕೆ

ಪೀಣ್ಯ ದಾಸರಹಳ್ಳಿ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು ಅಬ್ಬಿಗೆರೆ ವಿನೋದ್ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.
ಬಳಿಕ ಮಾತನಾಡಿದ ಅಬ್ಬಿಗೆರೆ ವಿನೋದ್, ಕಳೆದ ಎರಡು ವರ್ಷಗಳಿಂದ ಕರವೇ ರಾಜ್ಯ ಯುವ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಕನ್ನಡ ತಾಯಿಯ ಸೇವೆಯನ್ನು ಮಾಡಿಕೊಂಡು ಬಂದಿದ್ದೇನೆ ಈಗ ನಮ್ಮ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ್ರುರವರು ನನ್ನ ಕೆಲಸಗಳನ್ನು ಗುರುತಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಸಂಘಟನೆ ವಹಿಸಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುತ್ತೇನೆ ನೆಲ, ಜಲ, ಭಾಷೆಗೋಸ್ಕರ ಹೋರಾಡುತ್ತೇವೆ ಕನ್ನಡ ಭಾಷೆಯನ್ನು ಉಳಿಸಲು ಪ್ರಯತ್ನಿಸುತ್ತೇವೆ ಕನ್ನಡ ತಾಯಿಯ ಸೇವೆಯನ್ನು ಮಾಡುತ್ತೇನೆ. ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ನಮ್ಮ ಸಂಘಟನೆ ಇನ್ನೂ ಹೆಚ್ಚು ರೀತಿಯಲ್ಲಿ ಕೆಲಸ ಮಾಡುವಂತೆ ಮಾಡುತ್ತೇನೆ ಎಂದು ಹೇಳಿದರು.

Related