ಬಜೆಪಿ ಅಭ್ಯರ್ಥಿಗೆ ಚುನಾವಣಾ ಖರ್ಚಿಗೆ ಹಣ ನೀಡಿದ ಚುರುಮುರಿ ವ್ಯಾಪಾರಿ

ಬಜೆಪಿ ಅಭ್ಯರ್ಥಿಗೆ ಚುನಾವಣಾ ಖರ್ಚಿಗೆ ಹಣ ನೀಡಿದ ಚುರುಮುರಿ ವ್ಯಾಪಾರಿ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದಂತೆ ಟಿಕೆಟ್ ಪಡೆದ ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರವನ್ನು ಕೈಗೊಂಡಿದ್ದಾರೆ.

ಇನ್ನು ಚಿಕ್ಕಮಗಳೂರಿನಲ್ಲಿ ಕೋಟ ಶ್ರೀನಿವಾಸ್ ಅವರು ಪ್ರಚಾರದ ಸಂದರ್ಭದಲ್ಲಿ ಕೋಟ ಶ್ರೀನಿವಾಸರ ಅಭಿಮಾನಿ ಒಬ್ಬರು ತಟ್ಟೆ ಒಂದರಲ್ಲಿ ತಾಂಬೂಲದ ಜೊತೆಗೆ ತನ್ನ ನೆಚ್ಚಿನ ನಾಯಕನಿಗೆ ಚುನಾವಣೆ ಕರ್ಚಿಗೆಂದು ಸುಮಾರು 25,000 ನಗದು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ನಗರದಲ್ಲಿ ಚಿಕ್ಕ ಅಂಗಡಿಯಲ್ಲಿ ಚುರುಮುರಿ ವ್ಯಾಪಾರಿ ಮಾಡುವ ಕೋಟ ಶ್ರೀನಿವಾಸ್ ಅಭಿಮಾನಿ ಒಬ್ಬರು ಚುನಾವಣಾ ಖರ್ಚಿಗೆ ಹಣ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ತೇಗೂರು ಸರ್ಕಲ್ ನಲ್ಲಿರುವ ಚುರುಮುರಿ ಅಂಗಡಿಯ ವ್ಯಾಪಾರಿ ಲೋಕೇಶ್ ಬಾಬು ಎಂಬುವವರು ಎಲೆ-ಅಡಿಕೆ-ಬಾಳೆಹಣ್ಣುಗಳ ತಾಂಬೂಲದಲ್ಲಿ 25 ಸಾವಿರ ಹಣ ಇಟ್ಟು ಕೊಟ್ಟಿದ್ದಾರೆ. ಇಂದು ಪ್ರಚಾರಕ್ಕೆಂದು ಹೋದಾಗ ಲೊಕೇಶ್, ತನ್ನ ನೆಚ್ಚಿನ ನಾಯಕನಿಗೆ ಹಣ ನೀಡಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ನಗರದ ವಿವಿದೆಡೆ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಚುರುಮುರಿ ಅಂಗಡಿಗೆ ಭೇಟಿ ನೀಡಿದ್ದು ವ್ಯಾಪಾರಿ ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ. ಸರಳ ಹಾಗೂ ಸಜ್ಜನ ವ್ಯಕ್ತಿತ್ವಕ್ಕೆ ಹೆಸರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

Related