ಬೆಳಗಾವಿ ಸಾಹುಕಾರ್ ಗೆ ಸಿಐಡಿ ಸಂಕಷ್ಟ!

ಬೆಳಗಾವಿ ಸಾಹುಕಾರ್ ಗೆ ಸಿಐಡಿ ಸಂಕಷ್ಟ!

ಬೆಂಗಳೂರು: ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸೌಭಾಗ್ಯ ಲಕ್ಷ್ಮಿ ಶುಗರ್ ಲೈಸೆನ್ಸ್ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಸಿಐಡಿ ಗೆ ನೀಡಿದೆ ಎಂದು ತಿಳಿದುಬಂದಿದೆ.

ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ ನಿಂದ ಸಾಲ ಪಡೆದುಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ, ವಸಂತ್ ವಿ ಪಾಟೀಲ್, ಶಂಕರ್ ಪವಾಡೆ ಮೇಲೆ ಎಫ್.ಐ.ಆರ್ ದಾಖಲಾಗಿತ್ತು. ಮಾಜಿ ಸಚಿವರು ಮಾತ್ರವಲ್ಲದೇ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ನ ಇಬ್ಬರು ಪದಾಧಿಕಾರಿಗಳ ವಿರುದ್ದವೂ ಎಫ್​ಐಆರ್​ ದಾಖಲು ಮಾಡಲಾಗಿತ್ತು. ಕಾರ್ಖಾನೆ ಸ್ಥಾಪನೆ ವಿಸ್ತರಣೆ ನಿರ್ವಹಣೆಗಾಗಿ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಸಾಲ ಪಡೆಯಲಾಗಿತ್ತು.

2013 ರಿಂದ 2017 ರವರೆಗೆ 232 ಕೋಟಿ 88 ಲಕ್ಷ ರೂಪಾಯಿಗಳ ಸಾಲ ಮಂಜೂರು ಮಾಡಲಾಗಿತ್ತು. ಸಾಲದ ಹಣ ಪಾವತಿ ಮಾಡದೇ 2023ರ ವೇಳೆಗೆ 439 ಕೋಟಿ 7 ಲಕ್ಷ ಸಾಲದ ಮೊತ್ತ ಬಾಕಿ ಉಳಿದಿತ್ತು. ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೇ, ಮೋಸ ಮಾಡುವ ಉದ್ದೇಶದಿಂದ ಯಾವುದೇ ಮಾಹಿತಿ ನೀಡದೇ ಆಡಳಿತ ಮಂಡಳಿ ಹುದ್ದೆಗಳಿಂದ ಹೊರಬಂದಿದ್ದಾರೆ ಎಂಬ ಆರೋಪ ಮಾಜಿ ಸಚಿವರ ವಿರುದ್ಧ ಕೇಳಿ ಬಂದಿದೆ. ಬ್ಯಾಂಕ್ ನವರಿಗೆ ನಂಬಿಕೆ ದ್ರೋಹ ಮಾಡಿದ್ದಾರೆಂದು ಆರೋಪ ಕೇಳಿ ಬಂದಿದ್ದು, ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಎಂಬುವವರಿಂದ ವಿವಿ ಪುರಂ ಠಾಣೆಗೆ ದೂರು ನೀಡಲಾಗಿದೆ. ವಿವಿಪುರಂ ಠಾಣೆಯಲ್ಲಿ ಮೂವರ ವಿರುದ್ಧ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ.

 

Related