ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಸಿಎಂ

ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಸಿಎಂ

ಹುಬ್ಬಳ್ಳಿ: ಪೊಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಿಎಆರ್ ಮೈದಾನದಲ್ಲಿ ಇಂದು ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ್, ಶಾಸಕ ಪ್ರಸಾದ ಅಬ್ಬಯ್ಯ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಎಡಿಜಿಪಿ ಪ್ರತಾಪ ರೆಡ್ಡಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಹಾಜರಿದ್ದರು.

ನಂತರ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಮಹಿಳೆಯರ ಆತ್ಮರಕ್ಷಣೆಗಾಗಿ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು…ಕೆಎಸ್ ಆರ್ ಪಿ ಪಡೆ ಹಾಗೂ ಪೋಲಿಸ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳ ಸೇವೆ ಹಾಗೂ ಅನುಭವವನ್ನು ಬಳಸಿಕೊಂಡು ಈ ತರಬೇತಿ ಒದಗಿಸಲಾಗುವುದು ಎಂದರು.

Related