ಬೆಂಗಳೂರು: ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ನಿಧನ ಕ್ಕೆ ಇಂದು ಇದೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ದುಃಖವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವಾರಕೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
ಡಾ. ರಾಜ್ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು.
ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ..
ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
ಡಾ. ರಾಜ್ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು… pic.twitter.com/ARyuMzFMC0— Siddaramaiah (@siddaramaiah) April 16, 2024
ಶ