ಮೀನುಗಾರಿಕೆ ಬಂದರು ಯೋಜನೆಗೆ ಸಿಎಂ ಶಂಕುಸ್ಥಾಪನೆ

ಮೀನುಗಾರಿಕೆ ಬಂದರು ಯೋಜನೆಗೆ ಸಿಎಂ ಶಂಕುಸ್ಥಾಪನೆ

ಉಡುಪಿ : ಉಡುಪಿ ಜಿಲ್ಲೆ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.

ಮೀನುಗಾರಿಕೆ ಇಲಾಖೆ ಅಧೀನದಲ್ಲಿರುವ ಸುಮಾರು 70 ಎಕರೆ ಜಾಗದಲ್ಲಿರುವ ಭೂಮಿಯಲ್ಲಿ ಮೀನುಗಾರಿಕೆ ಬಂದರಿಗಾಗಿ ಸುಸಜ್ಜಿತ ಮೀನುಗಾರಿಕಾ ಜಟ್ಟಿ, ಬ್ರೇಕ್ ವಾಟರ್ ಸೌಲಭ್ಯ, ಬೋಟ್ ರಿಪೇರಿ ಶೆಡ್, ಹರಾಜು ಮಳಿಗೆ, ವರ್ಕ್ ಮನ್ ಶೆಡ್, ಕಚೇರಿಗಳು ಸೇರಿದಂತೆ ಸುಸಜ್ಜಿತ ಬಂದರು 180.8 ಕೋಟಿ ರೂ. ನಿರ್ಮಾಣವಾಗಲಿದೆ.

ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ರವರು ಇಂದು ಮೀನುಗಾರರಿಗೆ ಸಂಕಷ್ಟ ಪರಿಹಾರ, ಮತ್ಸ್ಯಾಶ್ರಯ ಯೋಜನೆ ಹಾಗೂ ಭಾಗ್ಯಲಕ್ಷ್ಮಿ ಯೋಜನೆಯಡಿ ಚೆಕ್ ವಿತರಿಸಿದರು.

ಬಳಿಕ ಮಾಧ್ಯಮದವರೊಡನೆ ಮಾತನಾಡಿದ ಮುಖ್ಯಮಂತ್ರಿ, “ರಾಜಕೀಯ ಮರೆತು ಧಾರ್ಮಿಕ ಪ್ರವಾಸಕ್ಕಾಗಿ ಬಂದಿದ್ದೇನೆ. ಕರಂಬಳ್ಳಿ ವೆಂಕಟರಮಣ ದೇವಾಲಯ, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದೇನೆ. ಇದಲ್ಲದೆ ಉಚ್ಚಿಲದ ಮಹಾಲಕ್ಷ್ಮಿ ದೇವಾಲಯಕ್ಕೂ ಭೇಟಿ ನೀಡಲಿದ್ದೇನೆ. ಇದೀಗ ಆನೆಗುಡ್ಡೆಯ ವಿನಾಯಕ ದೇವಾಲಯಕ್ಕೆ ತೆರಳುತ್ತಿದ್ದೇನೆ ಎಂದರು.

ಸ್ವಾತಂತ್ರ  ಸಿಕ್ಕ ಕೂಡಲೇ ಗೋಹತ್ಯೆ ನಿಷೇಧ ಆಗಬೇಕೆನ್ನುವುದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಆದರೆ ಬೇರೆ ಬೇರೆ ಕಾರಣಗಳಿಂದ ಅದು ಮುಂದೂಡುತ್ತಾ ಬಂದಿತ್ತು. ಆದರೆ ನಾವಿಂದು ಈ ಕಾನೂನನ್ನು ತಕ್ಷಣಕ್ಕೆ ಜಾರಿಗೊಳಿಸಿದ್ದೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಲಾಲಾಜಿ.ಆರ್.ಮೆಂಡನ್, ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

Related