ರಾಮನವಮಿಯ ಶುಭಾಶಯ ಕೋರಿದ ಸಿಎಂ

ರಾಮನವಮಿಯ ಶುಭಾಶಯ ಕೋರಿದ ಸಿಎಂ

ಮಂಡ್ಯ: ಕರ್ನಾಟಕ ರಾಜ್ಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದು ಇಂದು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಮಾತನಾಡಿ, ಮಂಡ್ಯ ಜನತೆಗೆ ಶ್ರೀ ರಾಮನವಮಿಯ ಶುಭಾಶಯಗಳು ತಿಳಿಸಿದ್ದಾರೆ.

ಮಂಡ್ಯದ ಜನತೆಗೆ ಮತ್ತು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ಕೋರಿ ಎಲ್ಲರೂ ಭಕ್ತಿ ಶ್ರದ್ದೆ ಮತ್ತು ಸಂಭ್ರಮದಿಂದ ರಾಮನವಮಿ ಆಚರಿಸುವಂತೆ ಕೋರಿದರು. ಭಾವನಾತ್ಮಕವಾಗಿ ಕೆರಳಿಸಿ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ ಎಂದರು.

ಭಾರತೀಯರ ಭಾವನೆಗಳನ್ನು ಭಾವನಾತ್ಮಕವಾಗಿ ಕೆರಳಿಸಿ, ನಮ್ಮ ಬದುಕಿಗೆ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ. ಜನರ ಕಷ್ಟಗಳಿಗೆ ಸ್ಪಂದಿಸುವ ನಮಗೆ ಶಕ್ತಿ ಕೊಡಿ. ನೀವು ಕೊಟ್ಟ ಶಕ್ತಿ ನಿಮ್ಮ ಮನೆ ಬಾಗಿಲಿಗೇ ವಾಪಾಸ್ ಉತ್ತಮ ಕಾರ್ಯಕ್ರಮಗಳ ರೂಪದಲ್ಲಿ ವಾಪಾಸ್ ಬರುತ್ತದೆ ಎಂದು ಘೋಷಿಸಿದರು.

 

Related