ನಟ ಶಿವರಾಜ್​ಕುಮಾರ್ ವಿರುದ್ಧ ದೂರು..!?

ನಟ ಶಿವರಾಜ್​ಕುಮಾರ್ ವಿರುದ್ಧ ದೂರು..!?

ಬೆಂಗಳೂರು: ಕನ್ನಡದ ಚಕ್ರವರ್ತಿ ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಅವರ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಶಿವರಾಜ್ ಕುಮಾರ್ ಅವರು  ಗೀತಾ ಪರವಾಗಿ ಪ್ರಚಾರವನ್ನು ಕೈಗೊಂಡಿದ್ದಾರೆ. ಇದು ಮಾತ್ರವಲ್ಲದೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿಯೂ ಕೂಡ ಲೋಕಸಭಾ ಚುನಾವಣೆಯಲ್ಲಿ ನಟ ಶಿವರಾಜ್ ಕುಮಾರ್ ಅವರು ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಚುನಾವಣಾ ಪ್ರಚಾರದಲ್ಲಿ ತೊಡಗಿರುವ ನಟ ಶಿವರಾಜ್ ಕುಮಾರ್ ಅವರ ನಟನೆಯ ಚಿತ್ರ ಮತ್ತು ಜಾಹೀರಾತು ಬಿಲ್ಲುಗಳನ್ನು ಇನ್ನಿತರ ಯಾವುದೇ ಚಟುವಟಿಕೆಗಳನ್ನು ಚುನಾವಣೆಯಾಗುವವರೆಗೂ ಪ್ರಸಾರ ಮಾಡಬಾರದೆಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗ ಮೋರ್ಚದಿಂದ ದೂರು ನೀಡಲಾಗಿದೆ. ಮೋರ್ಚಾದ ಅಧ್ಯಕ್ಷ ಆರ್​. ರಘು ಅವರು ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಪ್ರಭಾವಿ ವ್ಯಕ್ತಿ ಆಗಿರುವ ಶಿವರಾಜ್​ಕುಮಾರ್​ ಅವರು ರಾಜ್ಯದ್ಯಂತ ಕಾಂಗ್ರೆಸ್​ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಅವರು ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವ ತನಕ ಶಿವರಾಜ್​ಕುಮಾರ್​ ಅವರ ಸಿನಿಮಾ, ಜಾಹೀರಾತು, ಬಿಲ್​ಬೋರ್ಡ್​ಗಳನ್ನು ಪ್ರದರ್ಶನ ಮಾಡದಂತೆ ಚಿತ್ರಮಂದಿರ, ಟಿವಿ ಚಾನೆಲ್​, ಸೋಶಿಯಲ್​ ಮೀಡಿಯಾ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇನೆ’ ಎಂದು ರಘು ಅವರು ಪತ್ರ ಬರೆದಿದ್ದಾರೆ.

ಚುನಾವಣಾ ಆಯೋಗವು ನ್ಯಾಯಯುತವಾದ ಚುನಾವಣೆಯನ್ನು ನಡೆಸುತ್ತದೆ ಎಂದು ನನಗೆ ಭರವಸೆ ಇದೆ. ನನ್ನ ಮನವಿಗೆ ಆಯೋಗವು ಸ್ಪಂದಿಸುತ್ತದೆ ಮತ್ತು ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ನಂಬಿದ್ದೇನೆ ಎಂದು ಪತ್ರವನ್ನು ಪೂರ್ಣಗೊಳಿಸಿದ್ದಾರೆ ರಘು.

 

Related