ರೈತರ ಮೇಲೆ ದೌರ್ಜನ್ಯಕ್ಕೆ ಖಂಡನೆ

ರೈತರ ಮೇಲೆ ದೌರ್ಜನ್ಯಕ್ಕೆ ಖಂಡನೆ

ಹೊಸಪೇಟೆ : ಭೂಸುಧಾರಣೆ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಹಾಗೂ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿ ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಇಲ್ಲಿನ ಹೊಸಪೇಟೆ-ಬಳ್ಳಾರಿ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸುತ್ತಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿದ ಪ್ರತಿಭಟನಾಕಾರರು ನವದೆಹಲಿಯಲ್ಲಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿದರು.
ಹೆದ್ದಾರಿ ತಡೆಯಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಕೆಲ ವಾಹನಗಳು ಹೆದ್ದಾರಿ ಪಕ್ಕದಲ್ಲಿಯೇ ನಿಂತರೆ, ಕೆಲ ವಾಹನಗಳನ್ನು ಪೊಲೀಸರು ಬೇರೆ ಮಾರ್ಗದಿಂದ ಕಳುಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್ ಮಾತನಾಡಿ, ಕೋವಿಡ್ ಲಾಕ್‌ಡೌನ್‌ನಲ್ಲಿ ಕೇಂದ್ರ ಸರ್ಕಾರವು ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ಜಾರಿಗೆ ತಂದಿದೆ. ಪಂಜಾಬ್ ಹರಿಯಾಣ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೆ ಅದಕ್ಕೆ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

Related