ಹೈಕಮಾಂಡ್ ನಿಂದ ತುರ್ತು ಬುಲಾವ್ : ದೆಹಲಿಗೆ ತೆರಳಲಿದ್ದಾರೆ ಕಾಂಗ್ರೆಸ್ ನಾಯಕರು

ಬೆಂಗಳೂರು: ಹೈಕಮಾಂಡ್​ನಿಂದ ತುರ್ತು ಬುಲಾವ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ. ಇಂದು ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಗೂ ನಾಳೆ ಬೆಳಗ್ಗೆ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.


ರಾಜ್ಯಸಭೆ, ಮೇಲ್ಮನೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಪಕ್ಷದೊಳಗಿನ ಆಂತರಿಕ ಅಸಮಾಧಾನ, ನಾಯಕರ ನಡುವಿನ ಹೊಂದಾಣಿಕೆ ಕೊರತೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಪ್ರಿಯಾಂಕ ಗಾಂಧಿ ರಾಜ್ಯದಿಂದ ಸ್ಪರ್ಧಿಸುವಂತೆ ಈ ಹಿಂದೆ ಡಿಕೆಶಿ ಬೇಡಿಕೆ ಇಟ್ಟಿದ್ದರು. ಹೀಗಾಗಿ, ಇದರ ಬಗ್ಗೆಯೂ ಚರ್ಚೆ ಸಾಧ್ಯತೆಯಿದೆ.

ಇದೇ ವೇಳೆ ರಾಹುಲ್ ಗಾಂಧಿಯವರನ್ನು ಪ್ರತ್ಯೇಕ ಭೇಟಿಗೆ ನಿರ್ಧರಿಸಿರುವ ಸಿದ್ದು, ಸಿಎಂ ಅಭ್ಯರ್ಥಿ ಕನ್ಫರ್ಮೇಶನ್ ಮಾಡುವಂತೆ ಒತ್ತಡ ಹೇರುವ ಸಾಧ್ಯತೆಯಿದೆ. ತಮಗೆ ಅವಕಾಶ ಕೊಟ್ಟರೆ ಮಾತ್ರ ಸರ್ಕಾರ ಅಧಿಕಾರಕ್ಕೆ ತರುತ್ತೇನೆಂದು ಭರವಸೆ ನೀಡಲಿದ್ದಾರೆ ಎನ್ನಲಾಗಿದೆ.

Related