ರಾಹುಲ್ ಗಾಂಧಿ ಜೊತೆ ಡಿ.ಕೆ.ಶಿ ಚರ್ಚೆ

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿಯ ಚಿಂತನಾ ಶಿಬಿರದಲ್ಲಿ ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ. ಕೆ. ಸುರೇಶ್, ಎಐಸಿಸಿ ಕಾರ್ಯದರ್ಶಿ ಭೋಸರಾಜ್ ಮತ್ತಿತರರು ಇದ್ದಾರೆ.


ಮತ್ತೊಂದು ಚಿತ್ರದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೂ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಡಿ.ಕೆ. ಸುರೇಶ್ ಅವರೂ ಇದ್ದಾರೆ.

Related