ಕಾಂಗ್ರೆಸ್‌ ಸರ್ಕಾರ ಎಲ್ಲ ಧರ್ಮದವರಿಗೂ ರಕ್ಷಣೆ ನೀಡುತ್ತದೆ: ಸಿಎಂ

ಕಾಂಗ್ರೆಸ್‌ ಸರ್ಕಾರ ಎಲ್ಲ ಧರ್ಮದವರಿಗೂ ರಕ್ಷಣೆ ನೀಡುತ್ತದೆ: ಸಿಎಂ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಎಲ್ಲ ಧರ್ಮಗಳಿಗೂ ಸಮಾನ ರೀತಿಯಲ್ಲಿ ನೋಡುತ್ತದೆ ಹಾಗಾಗಿ ನಾವು ಎಲ್ಲಾ ಧರ್ಮದವರಿಗೂ ಸೇರಿ ಕರ್ನಾಟಕದಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದವರು, ನಮ್ಮ ಸರ್ಕಾರದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ತಂದಿದ್ದೇವೆ ಯಾವುದನ್ನೂ ಇಂತಹ ಧರ್ಮಕ್ಕೆ ಅಂತ ಮಾಡಿಲ್ಲ. ಇಡೀ ರಾಜ್ಯದ ಎಲ್ಲ ಜಾತಿ, ಧರ್ಮದ ಜನರಿಗೂ ಅನುಷ್ಠಾನಗೊಳಿಸುತ್ತಿದ್ದೇವೆ. ಅದೇ ರೀತಿ ಮುಂದೆಯೂ ಕೆಲಸ ಮಾಡುತ್ತೇವೆ ಎಂದರು.

ನಮ್ಮ ಸರ್ಕಾರದಲ್ಲಿ ಯಾವುದೇ ಕಾರ್ಯಕ್ರಮವನ್ನು ಒಂದು ಧರ್ಮಕ್ಕೆ ಸೀಮಿತವಾಗಿ ಮಾಡಿಲ್ಲ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಎಲ್ಲ ಗ್ಯಾರಂಟಿಗಳನ್ನು ಇಡೀ ರಾಜ್ಯದ ಎಲ್ಲ ಧರ್ಮ, ಜಾತಿ ಜನರಿಗೂ ಜಾರಿಗೊಳಿಸಿದ್ದೇವೆ. ನಮ್ಮ ಮೇಲೆ ವಿಪಕ್ಷಗಳು ಸುಮ್ಮನೆ ಟೀಕೆ ಮಾಡ್ತವೆ. ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.

 

Related