ಲೋಕಸಮರಕ್ಕೆ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಸಜ್ಜು

ಲೋಕಸಮರಕ್ಕೆ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಸಜ್ಜು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್  ಪಕ್ಷ ಮುಂದಾಗಿದೆ. ಹೌದು, ರಾಜ್ಯದಲ್ಲಿರುವ ಸುಮಾರು 100 ರಾಮನ ದೇವಾಲಯಗಳನ್ನು ಜೀವನೋದ್ಧಾರ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಹೊಸ ಯೋಜನೆಯನ್ನು ರೂಪಿಸಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಶ್ರೀರಾಮ ಮಂದಿರಗಳ ಅಭಿವೃದ್ಧಿಗೆ ತಯಾರಿ ಶುರುವಾಗಿದೆ. ರಾಜ್ಯದ ಸುಮಾರು 100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಬಜೆಟ್ ನಲ್ಲಿ ಹಣ ಮೀಸಲಿಡಲು ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ 100 ರಾಮಮಂದಿರಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಬಿಜೆಪಿಗೆ ಟಕ್ಕರ್ ಕೊಡಲು ಮುಂದಾಗಿದೆ. ರಾಮನ ವಿರೋಧಿಗಳು, ಹಿಂದೂ ಧರ್ಮ ವಿರೋಧಿಗಳು ಎಂಬ ಹಣೆಪಟ್ಟಿ ಕಿತ್ತೆಸೆಯಲು ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದೆ. ರಾಜ್ಯದಲ್ಲಿನ 100 ಹಳೆಯ, ಪ್ರಸಿದ್ಧ ರಾಮ ಮಂದಿರಗಳ ಜೀರ್ಣೋದ್ಧಾರದ ಮೂಲಕ ಬಿಜೆಪಿಗೆ ತಿರುಗೇಟು ನೀಡಲು ಬಜೆಟ್​ನಲ್ಲಿ ಹಣ ನೀಡುವಂತೆ ಧಾರ್ಮಿಕ ದತ್ತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.

ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ರಾಮಮಂದಿರ ಜೀರ್ಣೋದ್ಧಾರಕ್ಕಾಗಿ ಬಜೆಟ್​ನಲ್ಲಿ ಹಣ ಬಿಡುಗಡೆ ಮಾಡಲು ಡಿಮ್ಯಾಂಡ್ ಮಾಡಿದ್ದಾರೆ. ರಾಮ ಎಲ್ಲರಿಗೂ ಸಲ್ಲುವ ದೇವರು, ಒಂದು ಪಕ್ಷದ ದೇವರಲ್ಲ. ರಾಮನ ದೇವಸ್ಥಾನವನ್ನೂ ನಿರ್ಮಾಣ ಮಾಡ್ತಿವಿ, ಈಶ್ವರನ ದೇವಸ್ಥಾನವನ್ನೂ ನಿರ್ಮಾಣ ಮಾಡ್ತೀವಿ. ಶ್ರೀರಾಮನನ್ನು ದೇಶದಲ್ಲಿ ಎಲ್ರೂ ಪೂಜಿಸುತ್ತಾರೆ. ರಾಮ ಬಿಜೆಪಿ ಅವ್ರಿಗೆ ಮಾತ್ರ ದೇವರಲ್ಲ ಎಲ್ಲರಿಗೂ ದೇವರು ಎಂದು ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಈ ಮೂಲಕ ಶ್ರೀರಾಮನ ಭಕ್ತರ ಓಲೈಕೆಗೆ ಕಾಂಗ್ರೆಸ್ ಮುಂದಾಗಿದೆ.

 

Related