ಕಾಂಗ್ರೆಸ್‌ನವರ ಗೂಂಡಾಗಿರಿಗೆ ಅವಕಾಶ ಇಲ್ಲ

ಕಾಂಗ್ರೆಸ್‌ನವರ ಗೂಂಡಾಗಿರಿಗೆ ಅವಕಾಶ ಇಲ್ಲ

ಶಿವಮೊಗ್ಗ : ಕಾಂಗ್ರೆಸ್  ಪಕ್ಷ  ಅದನ್ನು ಬೆಂಬಲಿಸಿ ತನ್ನ ಅಸ್ತಿತ್ವ ಹುಡುಕುತ್ತಿದ್ದು, ಕಾಂಗ್ರೆಸ್‌ನವರ ಈ ಗೂಂಡಾಗಿರಿಗೆ ಇಲ್ಲಿ ಅವಕಾಶ ಇರಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಇಂದು ಭದ್ರಾವತಿ ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ್ ಮನೆಗೆ ಆಗಮಿಸಿ ಪಕ್ಷದ ಪ್ರಮುಖರು ಕಾರ್ಯಕರ್ತರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರ ನಡೆಸುವ ಗೂಂಡಾಗಿರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ ಎಂದರು.

ಭದ್ರಾವತಿ ಶಾಸಕ ಸಂಗಮೇಶ್ ನೇತೃತ್ವದಲ್ಲಿ ತುಘಲಕ್ ದರ್ಬಾರ್ ನಡೆದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ದಿನದಿಂದ ದಿನಕ್ಕೆ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಕೆಟ್ಟ  ಸಂಸ್ಕೃತಿಯಿಂದ ಕೂಡಿರುವ ಕಾಂಗ್ರೆಸ್ ನಾಯಕರಿಗೆ ಒಳ್ಳೆಯದು ಯಾವುದೂ ಕಣ್ಣಿಗೆ ಕಾಣುವುದಿಲ್ಲ.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಧರ್ಮಪ್ರಸಾದ್, ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ, ಒಳಚರಂಡಿ ನಿಗಮದ ನಿರ್ದೇಶಕ ರುದ್ರೇಶ್ ಮಂಗೋಟೆ, ಸೂಡಾ ಸದಸ್ಯರಾದ ಕದಿರೇಶ್, ರಾಮಲಿಂಗಯ್ಯ ಹಟ್ಟಿ ಚಿನ್ನದಗಣಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಇನ್ನಿತರ ನಾಯಕರು ಇದ್ದರು.

Related