ಸಿಎಂಗೆ ಭೇಟಿಯಾದ ಕಾಂಗ್ರೆಸ್ ಶಾಸಕ

ಸಿಎಂಗೆ ಭೇಟಿಯಾದ ಕಾಂಗ್ರೆಸ್ ಶಾಸಕ

ಬೆಂಗಳೂರು : ಹಾನಗಲ್ ಉಪಚುನಾವಣೆಯಲ್ಲಿ ಜಯ ಸಾಧಿಸಿದ ಕಾಂಗ್ರೆಸ್‌ನ ಶ್ರೀನಿವಾಸ್ ಮಾನೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಶಾಸಕ ಮಾನೆ, ಚುನಾವಣೆಯ ಫಲಿತಾಂಶ ಬಂದ ಬಳಿಕ ಸಿಎಂ ಬೊಮ್ಮಾಯಿವರನ್ನು ಆತ್ಮೀಯವಾಗಿ ನಾನು ಅವರು ಒಂದೇ ಕ್ಷೇತ್ರದಿಂದ ಬಂದಿದ್ದೇವೆ. ಅನೇಕ ವರ್ಷಗಳಿಂದ ಅವರ ಜೊತೆ ಆತ್ಮೀಯತೆಯಿದೆ. ನಾನು ಗೌರವಿಸುವ ವ್ಯಕ್ತಿಗಳಲ್ಲಿ ಬೊಮ್ಮಾಯಿ ಕೂಡ ಒಬ್ಬರು. ಹಾನಗಲ್ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ ಎಂದಿದ್ದಾರೆ ಎಂದು ಹೇಳಿದರು.

ಬಿಟ್ ಕಾಯಿನ್ ವಿಚಾರ ಜೋರಾಗಿರುವ ಸಮಯದಲ್ಲಿ ಸಿಎಂ ಭೇಟಿಯಾಗಿದ್ದು, ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗೋದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಮಾನೆ, ರಾಜಕಾರಣವೇ ಬೇರೆ ಆಡಳಿತವೇ ಬೇರೆ. ಬಿಟ್ ಕಾಯಿನ್ ವಿಚಾರವೇ ಬೇರೆ ನನ್ನ ಭೇಟಿಯ ವಿಚಾರವೇ ಬೇರೆ ಶಾಸಕನಾಗಿ ಸಿಎಂ ಭೇಟಿಯಾಗುವುದು ನನ್ನ ಕರ್ತವ್ಯ. ಕ್ಷೇತ್ರದ ಅಭಿವೃದ್ಧಿಯಾಗಬೇಕು, ಅದಕ್ಕೆ ಭೇಟಿಯಾಗಿದ್ದೇನೆ ಎಂದರು.

Related