ರಾಜ್ಯದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ನ ಹೊಸ ಅಸ್ತ್ರ

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ನ ಹೊಸ ಅಸ್ತ್ರ

ಅಂಕೋಲಾ: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಗ್ಯಾರಂಟಿ ಅಸ್ತ್ರವನ್ನು ಉಪಯೋಗಿಸಿಕೊಂಡು ಬಹುಮತದಿಂದ ಗೆದ್ದು ತನ್ನ ಅಧಿಕಾರದ ಗದ್ದುಗೆಯನ್ನು ಏರಿದೆ.

ಇನ್ನು ಲೋಕಸಭಾ ಚುನಾವಣೆಯಲ್ಲೂ ಸಹ ಗ್ಯಾರಂಟಿ ಅಸ್ತ್ರವನ್ನು ಉಪಯೋಗಿಸಿ ರಾಜ್ಯದಲ್ಲಿ 20 ಸೀಟ್ ಗೆಲ್ಲುವ ಆಕಾಂಕ್ಷೆಯನ್ನು ಹೊಂದಿದೆ.

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟವಾಗು ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

ಅಂಕೋಲದಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಬಂದ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿಯೂ ಪುನರಾವರ್ತಿತವಾಗಲಿದೆ. 28ರ ಪೈಕಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಪಕ್ಷವನ್ನು ಸಂಘಟಿಸುವ ಕೆಲಸ ಒಂದು ಅಥವಾ ಎರಡು ದಿನ, ಚುನಾವಣಾ ಸಮಯದಲ್ಲಿ ಮಾತ್ರವೇ ಅಲ್ಲದೆ, ನಿರಂತರವಾಗಿ ನಡೆಯುವಂತೆ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆಂದು ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಆದರೆ, ಯಾರೂ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿಲ್ಲ. ಬಿಜೆಪಿಯಿಂದಲೂ ನಮಗೆ ಯಾರೂ ಅಗತ್ಯವಿಲ್ಲ ಎಂದು ತಿಳಿಸಿದರು.

ಎಚ್ ಕೆ ಪಾಟೀಲ್ ಮಾತನಾಡಿ, ಮುಂಬರುವ ಚುನಾವಣೆಯ ಕುರಿತು ಪಕ್ಷದಲ್ಲಿ ಉತ್ಸಾಹವಿದೆ. ‘ಚುನಾವಣೆಯಲ್ಲಿ ಪಕ್ಷ 20 ಸ್ಥಾನಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಇಂದಿನ ಈ ಸಭೆಯು ಸಂತಸ ತಂದಿದೆ. ಸಭೆಯಲ್ಲಿ ಎಲ್ಲರೂ ಮನಃಪೂರ್ವಕವಾಗಿ ಮಾತನಾಡಿದ್ದಾರೆ. ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಬಗೆಹರಿಸಲು ಇಲ್ಲಿ ನಾಯಕರಿದ್ದಾರೆ’ ಎಂದು ಹೇಳಿದರು.

 

Related