ಬೆಂಗಳೂರು: ನಗರದಲ್ಲಿ ಶನಿವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೊರೊನಾ ವಿಚಾರ ಸಂಬಂಧ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.
ತಜ್ಞರೊಂದಿಗೆ ಸಭೆ ಮುಗಿಯುತ್ತಿದ್ದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
“ಸಾರ್ವಜನಿಕ ಸಭೆ, ಸಮಾರಂಭದ ನಿಯಂತ್ರಣದ ಕುರಿತು ಸಭೆಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಶುಕ್ರವಾರ ಕಂದಾಯ ಸಚಿವ ಆರ್. ಅಶೋಕ್ ವರದಿಗಾರರಿಗೆ ತಿಳಿಸಿದರು.