ಚಾಮರಾಜನಗರ : ಮಂಡ್ಯದಿಂದ ಬ್ಯಾಡಮೂಡ್ಲು ಗ್ರಾಮಕ್ಕೆ ಮಹಿಳೆಗೆ ಕೊರೋನಾ ಸೋಂಕು ಲಕ್ಷಣ ಕಂಡು ಬಂದಿದ್ದು, ಖಾಸಗಿ ಆಸ್ಪತ್ರೆ ತಾತ್ಕಾಲಿಕ ಬಂದ್ ಮಾಡಲಾಗಿದೆ.
ಕೊರೋನಾ ಶಂಕೆ ಹಿನ್ನೆಲೆ ಕೋವಿಡ್ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗಿದೆ. ಮಹಿಳೆಯನ್ನು ಐಸೋಲೇಷನ್ ವಾರ್ಡ್ನಲ್ಲಿ ದಾಖಲಿಸಲಾಗಿದೆ.
ಉಸಿರಾಟ ತೊಂದರೆ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದ ಮಹಿಳೆಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವೈದ್ಯರು ವರದಿಯ ನಿರೀಕ್ಷೆಯಲ್ಲಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಭ್ರಮರಾಂಬ ಬಡಾವಣೆಯಲ್ಲಿರುವ ಬಸವರಾಜೇಂದ್ರ ಆಸ್ಪತ್ರೆಯನ್ನು ಬಂದ್ ಮಾಡಲಾಗಿದೆ. ಸ್ವಯಂಪ್ರೇರಿತವಾಗಿ ಇಬ್ಬರು ವೈದ್ಯರು, ಐವರು ಸಿಬ್ಬಂದಿ ಕ್ವಾರಂಟನ್ಗೆ ಒಳಪಟ್ಟಿದ್ದಾರೆ.