ಕೋಲಾರ: ರಾಜ್ಯದಲ್ಲಿ 2023ನೇ ಚುನಾವಣೆಯ ಪ್ರಚಾರವು ಅಬ್ಬರದಿಂದ ನಡೆಯುತ್ತಿದ್ದು ಈಗಾಗಲೇ ರಾಜ್ಯ ನಾಯಕರ ಪರವಾಗಿ ರಾಷ್ಟ್ರ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ನಮ್ಮ ಸ್ಯಾಂಡಲ್ವುಡ್ ಸ್ಟಾರ್ ಗಳು ಪ್ರಚಾರದಲ್ಲಿ ತೊಡಗಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಿಜೆಪಿ ಅಭ್ಯರ್ಥಿಯ ಪರವಾಗಿ ಇಂದಿನಿಂದ ಪ್ರಚಾರ ಕೈಗೊಂಡಿದ್ದಾರೆ
ಹೌದು, ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯ ನಾಯಕರ ಪರವಾಗಿ ರಾಷ್ಟ್ರನಾಯಕರು ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ. ಜೊತೆಗೆ ಸ್ಟಾರ್ ಪ್ರಚಾರಕರು ಕೂಡ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಆರಂಭಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್, ಡಿ.ಬಾಸ್ ಅಂತಲೇ ಪ್ರಖ್ಯಾತಿ ಪಡೆದಿರುವ ದರ್ಶನ್ ಅವರು ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ.
ಕೋಲಾರ ಜಿಲ್ಲೆಯ ಕೆ.ಜಿ.ಎಫ್ ಕ್ಷೇತ್ರಕ್ಕೆ ಬೆಳಗ್ಗೆ 10ಕ್ಕೇ ಭೇಟಿ ನೀಡಲಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ಪರ ರೋಡ್ ಮಾಡಲಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರ ಪೇಟೆ ಕ್ಷೇತ್ರಕ್ಕೆ ಬೆಳಗ್ಗೆ 11 ಗಂಟೆಗೆ ಭೇಟಿ ನೀಡಿ ಇಲ್ಲಿನ ಬಿಜೆಪಿ ಅಭ್ಯರ್ಥಿ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ.
ಇನ್ನು ಕೋಲಾರ ಕ್ಷೇತ್ರಕ್ಕೆ ಮಧ್ಯಾಹ್ನ 12 ಗಂಟೆಗೆ ಭೇಟಿ ನೀಡಿ ಇಲ್ಲಿ ಅಭ್ಯರ್ಥಿ ಪರ ರೋಡ್ ಮಾಡಲಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಕ್ಕೆ ಕ್ಷೇತ್ರಕ್ಕೆ ಮಧ್ಯಾಹ್ನ 3 ಗಂಟೆಗೆ ಭೇಟಿ ನೀಡಿ ಇಲ್ಲಿನ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ಮಾಡಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಜೆ 4 ಗಂಟೆಗೆ ಭೇಟಿ ನೀಡಲಿದ್ದು, ಇಲ್ಲಿನ ಅಭ್ಯರ್ಥಿ ಪರ ರೋಡ್ ಶೋ ಮಾಡಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದ ವಿಜಯಪುರಕ್ಕೆ ಸಂಜೆ 5 ಗಂಟೆಗೆ ಭೇಟಿ ನೀಡಲಿದ್ದು, ಇಲ್ಲಿನ ಅಭ್ಯರ್ಥಿ ಪರ ರೋಡ್ ಶೋ ಮಾಡಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಜೆ 7 ಗಂಟೆಗೆ ಭೇಟಿ ನೀಡಲಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ಮಾಡಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಕ್ಷೇತ್ರಕ್ಕೆ ಸಂಜೆ 8 ಗಂಟೆಗೆ ಭೇಟಿ ನೀಡಲಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ಮಾಡಲಿದ್ದಾರೆ.