ಡಿ.ಕೆ. ಸುರೇಶ್ ರಾಜ್ಯದ ಪರವಾಗಿ ಧ್ವನಿಯೆತ್ತಿದ ಏಕೈಕ ಸಂಸದ: ಮುಖ್ಯಮಂತ್ರಿ ಚಂದ್ರು

ಡಿ.ಕೆ. ಸುರೇಶ್ ರಾಜ್ಯದ ಪರವಾಗಿ ಧ್ವನಿಯೆತ್ತಿದ ಏಕೈಕ ಸಂಸದ: ಮುಖ್ಯಮಂತ್ರಿ ಚಂದ್ರು

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರ ಪರವಾಗಿ ಹಿರಿಯ ನಟ ಹಾಗೂ ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಇಂದು ಶುಕ್ರವಾರ ಏಪ್ರಿಲ್ 19 ರಂದು ಪ್ರಚಾರ ಮಾಡಿದರು.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪಟ್ಟಣದಲ್ಲಿ ತೆರೆದ ವಾಹನದಲ್ಲಿ ಡಿ.ಕೆ. ಸುರೇಶ್ ಜೊತೆಗೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಚಂದ್ರು, ಡಿ.ಕೆ. ಸುರೇಶ್ ರಾಜ್ಯದ ಅತ್ಯುತ್ತಮ ಸಂಸದರಾಗಿದ್ದು, ಅವರಿಗೆ ಈ ಬಾರಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ ₹2000 ನೀಡುವ ಬಗ್ಗೆ ಹೆಚ್‌.ಡಿ. ಕುಮಾರಸ್ವಾಮಿ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ ಅವರು ಕೂಡ ಅದೇ ಮನಸ್ಥಿತಿಯನ್ನು ಬೆಳೆಸಿಕೊಂಡಿದ್ದಾರೆ. ಇಂತಹ ದುಷ್ಟಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಈ ಬಾರಿ ಡಿ.ಕೆ. ಸುರೇಶ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು.

ಸೋಲುವ ಭಯದಿಂದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಅವರು ಬಂಧಿಸಿರುವುದು ಕೇಜ್ರಿವಾಲ್‌ ಅವರನ್ನು ಮಾತ್ರವಲ್ಲ ಪ್ರಜಾಪ್ರಭುತ್ವವನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬ್ಯಾಂಕ್‌ ಅಕೌಂಟ್‌ಗಳನ್ನು ಸ್ಥಗಿತಗೊಳಿಸಿದ್ದಾರೆ. ಇಂತಹ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ಕೇಳಿಕೊಂಡರು.

ಇದು ಪಾಂಡವರು ಮತ್ತು ಕೌರವರು ನಡುವಿನ ಯುದ್ಧವಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜನಪರ ಯೋಜನೆಗಳನ್ನು ಮಾಡಿದ್ದರೆ, ಕೇಂದ್ರ ಸರ್ಕಾರ ಜನರ ಹಣವನ್ನು ಕೊಳ್ಳೆ ಹೊಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಅವರು ಮಾಡಿದ ಯಾವ ಘೋಷಣೆಗಳನ್ನು ಕೂಡ ಈಡೇರಿಸಿಲ್ಲ ಎಂದರು.

 

Related