ಡಿಸಿ ವಿ.ವಿ. ಜ್ಯೋತ್ಸ್ನಾ ಅಧಿಕಾರ ಸ್ವೀಕಾರ

ಡಿಸಿ ವಿ.ವಿ. ಜ್ಯೋತ್ಸ್ನಾ ಅಧಿಕಾರ ಸ್ವೀಕಾರ

ಕಲಬುರ್ಗಿ : ನೂತನ ಜಿಲ್ಲಾಧಿಕಾರಿಯಾಗಿ 2010ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಶನಿವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.

ಕಲಬುರ್ಗಿಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ. ಅವರನ್ನು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು.

2013ನೇ ಸಾಲಿನಲ್ಲಿ ಫೆಬ್ರವರಿ 18ರಿಂದ ಜೂನ್ 15ರ ವರೆಗೆ, ಸೆಪ್ಟೆಂಬರ್ 5 ರಿಂದ ಡಿಸೆಂಬರ್ 12ರ ವರೆಗೆ ಹಾಗೂ ಡಿಸೆಂಬರ್ 29 ರಿಂದ ಡಿಸೆಂಬರ್ 31ರ ವರೆಗೆ ಕಲಬುರ್ಗಿ ಜಿಲ್ಲೆಯ ಸೇಡಂ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ, ಚಿತ್ರದುರ್ಗ ಜಿಲ್ಲಾಧಿಕಾರಿ ಹಾಗೂ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Related