ಡಿಸಿಎಂ ರನ್ನು ಸಂಪುಟದಿಂದ ವಜಾ ಮಾಡಬೇಕು: ಜಿಟಿ ದೇವೇಗೌಡ

ಡಿಸಿಎಂ ರನ್ನು ಸಂಪುಟದಿಂದ ವಜಾ ಮಾಡಬೇಕು: ಜಿಟಿ ದೇವೇಗೌಡ

ಮೈಸೂರು: ಪ್ರಜ್ವಲ್ ಪೆನ್ ಡ್ರೈ ಪ್ರಕಾರ ಈಗ ಜೆಡಿಎಸ್ ನಾಯಕರನ್ನು ರೊಚ್ಚಿಗೆಬ್ಬಿಸಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರಿ ನಗರದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾಡಿ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹರ ಹಾಕಿದ್ದಾರೆ.

ಅದರಂತೆ ಜೆಡಿಎಸ್ ನ ಕೋರ್ ಕಮಿಟಿ ಅಧ್ಯಕ್ಷರಾಗಿರುವಂತಹ ಜಿ ಟಿ ದೇವೇಗೌಡ ಅವರು ಕೂಡ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಸಿಬಿಐಗೆ ಒಳಪಡಿಸಿದರೆ ನಾವು ಅಲ್ಲಿಯೇ ಇದಕ್ಕೆಲ್ಲಾ ಸಂಬಂಧಿಸಿದ ದಾಖಲೆಗಳನ್ನು ಕೊಡುತ್ತೇವೆ ವಕೀಲರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬಗ್ಗೆ ಅಚ್ಚರಿ ಹೇಳಿಕೆ ನೀಡಿ ಆತಂಕ ಸೃಷ್ಟಿಸಿದ ಜಾರಕಿ ಹೊಳಿ..!

ತಮ್ಮ ಪಕ್ಷ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಅಂತ ಆಗ್ರಹಿಸಿದರೆ ಸರ್ಕಾರ ಅದನ್ನು ಮಾಡಲ್ಲ, ಇದೇ ಹಿನ್ನೆಲೆಯಲ್ಲಿ ತಾವು ಪ್ರಕರಣವನ್ನು ನ್ಯಾಯಾಂಗ ತನಿಖೆ ಒಪ್ಪಿಸುವಂತೆ ಹೇಳುತ್ತಿದ್ದೇವೆ ಎಂದು ಅವರು ಹೇಳಿದರು.

ಈ ಪ್ರಕರಣದ ಸೃಷ್ಟಿಯ ನೇತೃತ್ವ ವಹಿಸಿದ್ದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅನ್ನೋದು ಶಿವರಾಮೇಗೌಡರ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ ಮತ್ತು ಅವರು ತಪ್ಪಿತಸ್ಥರೆನ್ನುವುದು ಸಾಬೀತಾಗುತ್ತದೆ. ಹಾಗಾಗಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ ಮುಖ್ಯಮಂತ್ರಿಯವರು ಶಿವಕುಮಾರ್ ರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ದೇವೇಗೌಡ ಹೇಳಿದರು. ಅವರ ವಿರುದ್ಧ ಕ್ರಮ ಜರುಗಿಸದಿದ್ದ್ದರೆ ತಮ್ಮ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

Related