ಸಿಸಿ ರಸ್ತೆ ಕಾಮಗಾರಿಗೆ ಡಿಸಿಎಂ ಚಾಲನೆ

ಸಿಸಿ ರಸ್ತೆ ಕಾಮಗಾರಿಗೆ ಡಿಸಿಎಂ ಚಾಲನೆ

ಬಾಗಲಕೋಟೆ : ಬಾದಾಮಿ ತಾಲೂಕಿನ ಬನಶಂಕರಿ ದೇವಸ್ಥಾನದ ತಿರುವು ರಸ್ತೆಗೆ ಸಿಮೆಂಟ ಕಾಂಕ್ರೆಟ್ ರಸ್ತೆ ನಿರ್ಮಾಣ ಹಾಗೂ ವಿದ್ಯುದ್ದೀಕರಣ ಕಾಮಗಾರಿಗೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರು ಶುಕ್ರವಾರ ಚಾಲನೆ ನೀಡಿದರು.

ಈ ಕಾಮಗಾರಿಗೆ 3.19 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು, 7 ಮೀಟರ ಅಗಲದ 700 ಮೀಟರ್ ಉದ್ದದ ಸಿ.ಸಿ ರಸ್ತೆ ಹಾಗೂ ಬಾಕ್ಸ ಕಲವರ್ಟ ನಿರ್ಮಾಣ, ಅಗಲೀಕರಣ ಒಳಗೊಂಡಿದೆ.

ಈ ಸಂದರ್ಭದಲ್ಲಿ ವಿಧಾನ ಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಜಿ.ಪಂ ಅಧ್ಯಕ್ಷೆ ಶ್ರೀಮತಿ ಬಾಯಕ್ಕ ಮೇಟಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ ರಾಜೇಂದ್ರ, ತಹಶೀಲ್ದಾರ್ ಸುಹಾಸ್ ಇಂಗಳೆ, ಪಿಡಬ್ಲೂಡಿ ಇಇ ಪ್ರಶಾಂತ ಸೇರಿದಂತೆ ಇನ್ನಿತರರಿದ್ದರು.

Related