ಸೂಕ್ತ ಚಿಕಿತ್ಸೆ ಇಲ್ಲದೆ ರೈತ ಸಾವು

ಸೂಕ್ತ ಚಿಕಿತ್ಸೆ ಇಲ್ಲದೆ ರೈತ ಸಾವು

ಸವಣೂರ : ರೈತ ಗಣೇಶ್ (45) ಸ್ವಂತ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿದ್ದು, ಸರಿಯಾದ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ ಘಟನೆ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಿಷಯ ತಿಳಿದ ತಕ್ಷಣ ಆಂಬುಲೆನ್ಸ್ನಲ್ಲಿ ಸವಣೂರ ತಾಲೂಕು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ತಾಲೂಕು ಆಸ್ಪತ್ರೆಯಲ್ಲಿ ಉತ್ತಮವಾದ ಚಿಕಿತ್ಸೆ ಇಲ್ಲದ ಕಾರಣ ಹಾಗೂ ವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಗಣೇಶ್ ಕೊನೆಯುಸಿರೆಳೆದ್ದಿದ್ದಾರೆ.

ಈ ಕುರಿತು ಸವಣೂರ ತಾಲ್ಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related