ಗೌರವಧನ ಹೆಚ್ಚಳಕ್ಕೆ ಆಗ್ರಹ

  • In State
  • July 11, 2020
  • 406 Views
ಗೌರವಧನ ಹೆಚ್ಚಳಕ್ಕೆ ಆಗ್ರಹ

ರಾಮದುರ್ಗ:ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಹಾಗೂ ಇತರ ಸೌಲಭ್ಯಗಳಿಗೆ ಒತ್ತಾಯಿಸಿ, ತಾಲೂಕಿನ ಆಶಾ ಕಾರ್ಯಕರ್ತೆಯರು ಶಾಸಕ ಮಹಾದೇವಪ್ಪ ಯಾದವಾಡ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕು ಆಶಾ ಕಾರ್ಯಕರ್ತೆಯರ ಮುಖಂಡೆ ಸರೋಜಿನಿ ಅಂಗಡಿ ಮಾತನಾಡಿ, ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿದ್ದ ಕಾರಣ, ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯತೆ ಬಂದೊದಗಿದೆ. ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮತ್ತು ತಮಗೆ ಸಿಗಬೇಕಾದ ಸವಲತ್ತುಗಳ ಬಗ್ಗೆ ಸಾಕಷ್ಟು ಬಾರಿ ಸರಕಾರಕ್ಕೆ ಮನವಿ ಮಾಡಿಕೊಂಡರು ಸ್ಪಂದನೆ ಸಿಗುತ್ತಿಲ್ಲ ಎಂದು ಹೇಳಿದರು.

ಮನವಿ ಸ್ವಿಕರಿಸಿದ ಶಾಸಕ ಮಹಾದೇವಪ್ಪ ಯಾದವಾಡ ಅವರು ಮಾತನಾಡಿ, ಯಾರು ತಮ್ಮ ಸೇವೆಯನ್ನು ನಿಲ್ಲಿಸಬೇಡಿ. ನಾವು ನಿಮ್ಮ ಜೊತೆಗಿದ್ದೇವೆ. ನಿಮ್ಮ ಕಾರ್ಯ ಮೆಚ್ಚುವಂತಹದ್ದು. ತಾವು ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಿರಿ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತಮ್ಮ ಸೇವೆ ಅತ್ಯವಶ್ಯಕ. ನಿಮ್ಮ ಬೇಡಿಕೆಗಳನ್ನು ಸರ್ಕಾರÀದ ಗಮನಕ್ಕೆ ತಂದು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ಭರವಸೆ ನೀಡಿದರು.

Related