ಮೋದಿ ಪ್ರಧಾನಿಯಾದ ದಿನ ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ: ದಿನೇಶ್ ಗುಂಡೂರಾವ್

ಮೋದಿ ಪ್ರಧಾನಿಯಾದ ದಿನ ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ: ದಿನೇಶ್ ಗುಂಡೂರಾವ್

ಮೈಸೂರು: ಲೋಕಸಭಾ ಚುನಾವಣೆಯನ್ನು ಮನದಲ್ಲಿಟ್ಟುಕೊಂಡು ಬಿಜೆಪಿಯ ಕೇಂದ್ರ ನಾಯಕರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ್ದಾರೆ.

ಬಿಜೆಪಿಯವರು ಹೆಸರಿಗೆ ಮಾತ್ರ ರಾಮರಾಜ್ಯ ಮಾಡುತ್ತಾರೆ. ಆದರೆ ಬಿಜೆಪಿಯವರು ಮಾಡುವ ಕೆಲಸ ಅಧರ್ಮದ ಕೆಲಸವಾಗಿರುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಪ್ರಧಾನಿಯಾದ ದಿನದಿಂದಲೇ ಪ್ರಜಾಪ್ರಭುತ್ವದ ಕಗ್ಗೋಲೆ ಶುರುವಾಗಿದೆ. ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ. ಅವರು ವಿರುದ್ಧ ಮಾತನಾಡಿದವರನ್ನು ಮುಗಿಸುವ ಹೆದರಿಸುವ ಬೆದರಿಸುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಯವರೇ ಬಿಜೆಪಿ ಕೇಂದ್ರ ಮುಖಂಡರನ್ನು ಪ್ರಶ್ನೆ ಮಾಡುವ ಪರಿಸ್ಥಿತಿ ಇಲ್ಲ. ಮಾಡಿದರೆ ಅವರನ್ನು ಮುಗಿಸುವ ಕೆಲಸ ಮಾಡಲಾಗುತ್ತದೆ. ಯಾವ ತನಿಖಾ ಸಂಸ್ಥೆಗಳು ರಾಜ್ಯಪಾಲರು ಸ್ವತಂತ್ರವಾಗಿಲ್ಲ. ಚುನಾವಣೆ ಬಂದಾಗ ಇವೆಲ್ಲವನ್ನು ಬಳಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

 

Related