ದೇವೇಗೌಡರ ಆರೋಪ ಸತ್ಯಕ್ಕೆ ದೂರ

ದೇವೇಗೌಡರ ಆರೋಪ ಸತ್ಯಕ್ಕೆ ದೂರ

ಮಂಡ್ಯ: ಕಲ್ಲುಗಣಿಕಾರಿಕೆ ವಿಚಾರದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಹೇಳಿದ್ದಾರೆ.

ಮಂಡ್ಯದ ಕೆ.ಆರ್ ಪೇಟೆಗೆ ಭೇಟಿ ನೀಡಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೇವೇಗೌಡರು ಪ್ರತಿಭಟನೆ ಮುಂದಾಗಬಾರದು. ಸ್ವಲ್ಪ ಕಾಲಾವಕಾಶ ಮಾಡಿಕೊಡಬೇಕು. ಅವರಿಗೆ ಯಾರೋ ತಪ್ಪು ಮಾಹಿತಿ ರವಾನಿಸಿದ್ದಾರೆ. ತಕ್ಷಣ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಹೇಳಿದರು.

ದೇವೇಗೌಡರು ನನಗೆ ತಂದೆ ಸಮಾನ. ಅವರಿಂದಲೇ ರಾಜಕೀಯದಲ್ಲಿ ಬೆಳೆದವನು. ಅವರ ಮಾತನ್ನ ಆರ್ಶಿವಾದ ಎಂದು ಭಾವಿಸುತ್ತೇನೆ. ದೇವೇಗೌಡರು ಸಮಯ ನೀಡಿದರೆ ಅವರು ಹೇಳಿದ ಸ್ಥಳಕ್ಕೆ ಹೋಗಿ ಮಾಹಿತಿ ಒದಗಿಸುತ್ತೇನೆ ಎಂಬ ಭರವಸೆ ನೀಡಿದರು.

ಜಿಲ್ಲೆಯ ಅಭಿವೃದ್ಧಿಗೆ ನಾನು ಶ್ರಮಿಸುತ್ತಿದ್ದೇನೆ. ದೇವೇಗೌಡರು ತುಂಬಾ ಹಿರಿಯರು. ನಾನು ಈಗಷ್ಟೆ ರಾಜಕೀಯದಲ್ಲಿ ಪುಟ್ಟ ಹೆಜ್ಜೆ ಇಡುತ್ತಿದ್ದೇನೆ. ಎಲ್ಲರ ಸಹಕಾರದಿಂದ ಅಭಿವೃದ್ಧಿ ಸಾಧ್ಯ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.

ದೇವೇಗೌಡರ ಗಮನಕ್ಕೆ ತರಲಿಲ್ಲ.

ಎರಡು ಕ್ವಾರಿಗೆ ಪರವಾನಿಗೆ ಪಡೆದ ಮಂಜು ಎನ್ನುವವರು 9 ಕೋಟಿ ರೂ. ರಾಯಲ್ಟಿ ಬಾಕಿ ಉಳಿಸಿಕೊಂಡಿದ್ದಾರೆ. ಜೊತೆಗೆ ಕ್ವಾರಿಯಿಂದ ಸಾಹುಕಾರ್ ಚನ್ನಯ್ಯ ನಾಲೆಗೆ ಧಕ್ಕೆಯಾಗಿತ್ತು. ವಾರಗಳ ಕಾಲ ನೀರು ನಿಲ್ಲಿಸಿ, ದುರಸ್ತಿ ಮಾಡಿಸಲಾಗಿತ್ತು. ಇದೆಲ್ಲವು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅಧಿಕಾರದ ವೇಳೆ ನಡೆದಿತ್ತು. ಆ     ಸಂದರ್ಭದಲ್ಲೇ ಕ್ವಾರಿಯನ್ನ ನಿಲ್ಲಿಸಲು ಆದೇಶ ಮಾಡಲಾಗಿತ್ತು. ಈ ಎಲ್ಲ ವಿಚಾರವನ್ನು ದೇವೇಗೌಡರ ಗಮನಕ್ಕೆ ತರಲಿಲ್ಲ. ಹಾಗಾಗಿ ಈ ರೀತಿ ಪ್ರಮಾದ ನಡೆದಿತ್ತು.

Related