ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನೆ ನಡೆಸಿದರು. 

ದಾಸಪ್ಪ ಹೆರಿಗೆ ಆಸ್ಪತ್ರೆಯನ್ನು 40 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ 24 ಹಾಸಿಗೆಗಳ ಸಾಮರ್ಥ್ಯದ ಜೊತೆಗೆ ಪಾಲಿ ಕ್ಲೀನಿಕ್ ವ್ಯವಸ್ಥೆಯಿದೆ. ಅಲ್ಲದೆ ಆಸ್ಪತ್ರೆಯನ್ನು ದಿನದ 24 ಗಂಟೆಯೂ ತೆರೆಯಲಾಗುತ್ತಿದ್ದು, ಒಂದು ತಿಂಗಳಲ್ಲಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಮಸ್ಯೆಗಳನ್ನು ಬಗೆಹರಿಸಲು, ನಾಗರಿಕರ ಸೇವೆಗೆ ಒದಗಿಸಲು ಮುಖ್ಯ ಆಯುಕ್ತರು ಸೂಚನೆ ನೀಡಿದರು. 

ಎಸ್.ಜೆ.ಪಿ ರಸ್ತೆಯ ಜಮಿಯಾ ಮಸೀದಿಯ ಬಳಿ ಜಲಮಂಡಳಿ ಇಲಾಖೆ ವತಿಯಿಂದ ಸೀವೇಜ್ ಲೈನ್ ಕೆಲಸ ನಡೆಯುತ್ತಿದ್ದು, ಈ ಲೈನ್ ರಸ್ತೆ ಮಾರ್ಗದಲ್ಲಿ ಹೋಗುವುದನ್ನು ಗಮನಿಸಿ ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಎಸ್.ಜೆ.ಪಿ ಉದ್ಯಾನವನದ ಮೂಲಕ ಸೀವೇಜ್ ಲೈನ್ ತೆಗೆದುಕೊಂಡು ಹೋಗಲು ಸೂಚಿಸಿ, ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಸತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 

Related