ಬಿ.ವೈ.ವಿಜಯೇಂದ್ರ ದಾವಣಗೆರೆಯಲ್ಲಿ ಬಿಜೆಪಿ ಮುಖಂಡರಿಗೆ ಹೇಳಿದ್ದೇನೆ?

ಬಿ.ವೈ.ವಿಜಯೇಂದ್ರ ದಾವಣಗೆರೆಯಲ್ಲಿ ಬಿಜೆಪಿ ಮುಖಂಡರಿಗೆ ಹೇಳಿದ್ದೇನೆ?

ದಾವಣಗೆರೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ, ಬಿಜೆಪಿ ನಾಯಕರುಗಳು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಕ್ಕೆ 28 ಕ್ಷೇತ್ರ ಗೆಲ್ಲುವ ಭರವಸೆಯನ್ನು ಹೊಂದಿದ್ದಾರೆ.

ಇನ್ನು ಬಿಜೆಪಿಯ ರಾಜ್ಯ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಇಂದು ದಾವಣಗೆರೆಗೆ ಭೇಟಿ ನೀಡಿ, ದಾವಣಗೆರೆ ಕ್ಷೇತ್ರದಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಬೇಕೆಂದು ಬಿಜೆಪಿ ಮುಖಂಡರಿಗೆ ಕರೆ ನೀಡಿದ್ದಾರೆ.

ಮತ್ತೆ ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು, ರಾಜ್ಯ ಪ್ರವಾಸ ಮಾಡಿ, ಪಕ್ಷ ಸಂಘಟಿಸಿದಂತೆ ನಾವು ಪಕ್ಷ ಸಂಘಟಿಸುವ ಮೂಲಕ ಅಧಿಕಾರಕ್ಕೆ ತರುವ ಕೆಲಸ ಮಾಡೋಣ ಎಂದು ಅವರು ಕರೆ ನೀಡಿದರು. ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿ. ರಾಜ್ಯಾಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ದಾವಣಗೆರೆಗೆ ಬರುತ್ತಿದ್ದು, ಇದೇ ಪ್ರೀತಿ, ವಿಶ್ವಾಸ ಸದಾ ಇರಲಿ ಎಂದರು.

ಕಳೆದ 6 ತಿಂಗಳಿನಿಂದ ಬಡವರು, ರೈತರು, ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸಲು ಜನತೆ ಸಂಕಲ್ಪ ಮಾಡಿದ್ದಾರೆ. ಇದಕ್ಕಾಗಿ ಲೋಕಸಭೆ ಚುನಾವಣೆ ಎದುರು ನೋಡುತ್ತಿದ್ದಾರೆ ಎಂದರು.

ಇನ್ನು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಯೋಧರಂತೆ ಸಜ್ಜಾಗಬೇಕು. ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ರಾಜ್ಯದ ಎಲ್ಲಾ 28 ಕ್ಷೇತ್ರದಲ್ಲೂ ಗೆಲ್ಲಿಸುವ ಮೂಲಕ ಮತ್ತೆ ಕೇಂದ್ರದಲ್ಲಿ ಬಿಜೆಪಿಯನ್ನು ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು. ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಮನೆಗೆ ಕಳಿಸಿ, ಬಹುಬಲದೊಂದಿಗೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ನಾವು, ನೀವೆಲ್ಲರೂ ಸೇರಿ ಶ್ರಮಿಸೋಣ ಎಂದು ವಿಜಯೇಂದ್ರ ಕರೆ ನೀಡಿದರು.

 

Related