ಚಾಮುಂಡಿ ಬೆಟ್ಟಕ್ಕೆ ಜಿಲ್ಲಾಧಿಕಾರಿ ಭೇಟಿ

ಚಾಮುಂಡಿ ಬೆಟ್ಟಕ್ಕೆ ಜಿಲ್ಲಾಧಿಕಾರಿ ಭೇಟಿ

ಮೈಸೂರು : ಚಾಮುಂಡಿ ಬೆಟ್ಟಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪತಿ ಸುಧೀರ್ ರೆಡ್ಡಿ ದಂಪತಿ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಬರಮಾಡಿಕೊಂಡಿತು.

ಚಾಮುಂಡಿ ಬೆಟ್ಟ ದೇಗುಲದ ಕಾರ್ಯ ನಿರ್ವಾಹಕ ಅಧಿಕಾರಿ ಎನ್.ಎಸ್ ಯತಿರಾಜ್ ಸಂಪತ್ ಕುಮಾರನ್, ವ್ಯವಸ್ಥಾಪಕ ಗೋವಿಂದ ರಾಜ್ ಹಾಗೂ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೂತನ ಜಿಲ್ಲಾಧಿಕಾರಿಗಳನ್ನು ಬರಮಾಡಿಕೊಂಡರು.

ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ 2009 ಬ್ಯಾಚಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಮೈಸೂರು ದಸರಾಕ್ಕೂ ಮುನ್ನ ಹಾಲಿ ಜಿಲ್ಲಾಧಿಕಾರಿ ಬಿ ಶರತ್ ಅವರನ್ನು ವರ್ಗಾವಣೆ ಮಾಡದಂತೆ ಸರ್ಕಾರದ ಮೇಲೆ ಅವರ ಸಮುದಾಯದವರು ಒತ್ತಡ ಹೇರಿದ್ದರು.

Related