ಜನಸಂದಣಿಯಾಗದಂತೆ ನೋಡಿಕೊಳ್ಳಿ- ಸಿಎಂ

ಜನಸಂದಣಿಯಾಗದಂತೆ ನೋಡಿಕೊಳ್ಳಿ- ಸಿಎಂ

ಬೆಂಗಳೂರು: ಕೋವಿಡ್ 3ನೇ ಅಲೆ ಕಾಲಿಟ್ಟ ಬೆನ್ನೆಲೆ, ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಸರ್ಕಾರದ ಕೋವಿಡ್ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ವರಮಾಹಲಕ್ಷ್ಮೀ, ಮೊಹರಂ ಹಬ್ಬದ ಶುಭಾಶಯ ತಿಳಿಸಿದ ಬೊಮ್ಮಾಯಿ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಪಾಲಿಸಿ, ಸೋಂಕು ನಿಯಂತ್ರಿಸಲು ಸಹಕರಿಸಿ, ಮಾರುಕಟ್ಟೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿಯಾಗದಂತೆ ಸ್ವಯಂ ಪ್ರೇರಣೆಯಿಂದ ನೋಡಿಕೊಳ್ಳಬೇಕು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣವಾಗುತ್ತಿದ್ದು, ಇದು ಹೀಗೆ ಮುಂದುವರೆದರೆ ನಮ್ಮಲ್ಲೆರ ಆರ್ಥಿಕ, ಶೈಕ್ಷಣಿಕ ಸೇರಿದಂತೆ ದೈನಂದಿನ ಚಟುವಟಿಕೆಗೆ ಸಹಕಾರಿಯಾಗುತ್ತದೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಇಂದು ದೇವರಾಜ್ ಅರಸು ಅವರ ಜನ್ಮ ದಿನದ ಪ್ರಯುಕ್ತ ರಾಜ್ಯ ಸರ್ಕಾರದಿಂದ ಹಲವು ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಅರಸು ಅವರ ಆದರ್ಶಗಳನ್ನು ಎಲ್ಲರು ಪಾಲಿಸೋಣ, ನಮ್ಮ ಆಡಳಿತದಲ್ಲಿಯೂ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುತ್ತೇವೆ ಎಂದರು.

Related