ಚುಂಚನಗಿರಿಗೆ ಬರಬೇಡಿ

ಚುಂಚನಗಿರಿಗೆ ಬರಬೇಡಿ

ಮಂಡ್ಯ, ಮಾ. 19 : ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಮುಂದಿನ ಎರಡು ವಾರಗಳ ಕಾಲ ಆದಿಚುಂಚನಗಿರಿಯ ಶ್ರೀ ಕಾಲಭೈರವೇಶ್ವರನ ದರ್ಶನಕ್ಕೆ ಭಕ್ತರು ಆಗಮಿಸದಂತೆ ಸೂಚಿಸಲಾಗಿದೆ.
ಕಾಲಭೈರವನ ದರ್ಶನ ಪಡೆಯಲು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಆಗಮಿಸುತ್ತಾರೆ. ಆದ್ರೆ ಸದ್ಯ ವಿಶ್ವದಾದ್ಯಂತ ಕೊರೊನಾ ವೈರಸ್ ಹರಡಿರುವ ಹಿನ್ನೆಲೆಯಲ್ಲಿ ಮುಂದಿನ 2 ವಾರಗಳ ಕಾಲ ದೇವರ ದರ್ಶನಕ್ಕೆ ಆಗಮಿಸದಂತೆ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.
ಕೊರೊನಾ ತಡೆಯುವ ಸಲುವಾಗಿ, ರಾಜ್ಯದ ಮಾಲ್ ಥೀಯೇಟರ್ಗಳನ್ನ ಬಂದ್ ಮಾಡುವಂತೆ ಹಾಗೂ ಹೆಚ್ಚಿನ ಜನಸಂದಣಿ ಸೇರುವ ಸಭೆ-ಸಮಾರಂಭಗಳನ್ನ ಮುಂದೂಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ನೀಡಿರೋ ಆದೇಶ ಮಾರ್ಚ್ 31ರವರೆಗೆ ಮುಂದುವರೆಯಲಿದೆ. ಈ ಹಿನ್ನೆಲೆ ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲೂ ಕೂಡ ದೇವರ ದರ್ಶನಕ್ಕೆ ಬ್ರೇಕ್ ಬಿದ್ದಿದೆ.

Related