ಕೋಲಾರ : ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ ಇಂದು ಬೆಳಿಗ್ಗೆ ನಂಗಲಿಯಿಂದ ಮುಳಬಾಗಿಲು ಪಟ್ಟಣದ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ವಾಹನ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ವಾಹನದಲ್ಲಿದ್ದಂತ 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.
ಶಾಲಾ ವಾಹನ ಪಲ್ಟಿಯಾಗಿ ಗಾಯಗೊಂಡಿರುವಂತ 15ಕ್ಕೂ ಹೆಚ್ಚು ಮಕ್ಕಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮುಳುಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.