ಅನಾರೋಗ್ಯದಿಂದ ಬಳಲುತ್ತಿರುವ ದೃಶ್ಯಂ ಖ್ಯಾತಿಯ ನಿರ್ದೇಶಕ

  • In Cinema
  • August 17, 2020
  • 380 Views
ಅನಾರೋಗ್ಯದಿಂದ ಬಳಲುತ್ತಿರುವ ದೃಶ್ಯಂ ಖ್ಯಾತಿಯ ನಿರ್ದೇಶಕ

ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಾಲಿವುಡ್’ನ ದೃಶ್ಯಂ ಖ್ಯಾತಿಯ ನಿರ್ದೇಶಕ ನಿಶಿಕಾಂತ್ ಕಾಮತ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಸಿಬ್ಬಂಧಿಗಳು ಮಾಹಿತಿ ನೀಡಿದರು.

ಯಕೃತ್ತಿನ ಸಮಸ್ಯೆಯಿಂದ ಹಲವು ದಿನಗಳಿಂದ ಬಳಲುತ್ತಿದ್ದ ನಿಶಿಕಾಂತ್ ಅವರು, ಅನಾರೋಗ್ಯ ಹೆಚ್ಚಾದ ಕಾರಣ ಜು.31ರಂದು ಹೈದರಾಬಾದ್’ನ ಎಐಜಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಿಶಿಕಾಂತ್ ಅವರು ಮೃತಪಟ್ಟಿದ್ದಾರೆಂಬ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿಶಿಕಾಂತ್ ಅವರ ಗೆಳೆಯ ಹಾಗೂ ನಿರ್ದೇಶಕ ಮಿಲ್ಪ್ ಝಾವೇರಿಯವರು, ನಿಶಿಕಾಂತ್ ಮೃತಪಟ್ಟಿಲ್ಲ. ವೈದ್ಯರು ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿದ್ದಾರೆಂದು ಹೇಳಿದ್ದಾರೆ.

Related