ಆತಂಕದ ಸಂಗತಿಯೊಂದನ್ನು ಹಂಚಿಕೊಂಡ ದುನಿಯಾ ವಿಜಿ!

ಆತಂಕದ ಸಂಗತಿಯೊಂದನ್ನು ಹಂಚಿಕೊಂಡ ದುನಿಯಾ ವಿಜಿ!

ಬೆಂಗಳೂರು: ದುನಿಯಾ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿರುವ ವಿಜಯ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವಾರು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನು ದುನಿಯಾ ವಿಜಯ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಸದ್ಯ ಅವರು ಭೀಮ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ದುನಿಯಾ ವಿಜಯ್ ಫೈಟರ್ ಸಿನಿಮಾದ ಕಾರ್ಯಕ್ರಮದಲ್ಲಿ ಆತಂಕದ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ತಮ್ಮನ್ನು ಅವಮಾನಿಸಿದ ವಿಚಾರದ ಜೊತೆಗೆ ತಮ್ಮನ್ನು ನಾಶ ಮಾಡುವುದಕ್ಕೆ ಪ್ರಯತ್ನಿಸಿದರು ಎನ್ನುವ ಸಂಗತಿಯನ್ನೂ ಅವರು ಹೇಳಿಕೊಂಡಿದ್ದಾರೆ. ಜೊತೆಗೆ ತಮ್ಮನ್ನು ಬೆಳೆಸಿದವರಿಗೆ ಕೃತಜ್ಞತೆಯನ್ನೂ ತಿಳಿಸಿದ್ದಾರೆ.

ಟೈಗರ್ ಪ್ರಭಾಕರ್ ಪುತ್ರ ವಿನೋದ್ ಪ್ರಭಾಕರ್ ನಟನೆಯ ಸಿನಿಮಾ ಫೈಟರ್ ಈ ಸಿನಿಮಾದ ಕಾರ್ಯಕ್ರಮಕ್ಕೆ ವಿಜಯ್ ಅತಿಥಿಯಾಗಿ ಆಗಮಿಸಿದ್ದರು. ಟೈಗರ್ ಪ್ರಭಾಕರ್ ಅವರನ್ನು, ಅವರ ಸಾಹಸ ದೃಶ್ಯಗಳನ್ನು ಇಷ್ಟ ಪಡುತ್ತಿದ್ದ ವಿಜಯ್, ಈ ಸಂದರ್ಭದಲ್ಲಿ ಪ್ರಭಾಕರ್ ಅವರನ್ನು ನೆನಪಿಸಿಕೊಂಡರು. ಪ್ರಭಾಕರ್ ಅವರು ಎದುರಿಗೆ ಬಂದರೆ ಹುಲಿ ಬಂದ ಹಾಗೆ ಇರುತ್ತಿತ್ತು ಎಂದಿದ್ದಾರೆ.

 

Related