ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಉತ್ಸುಕನಾಗಿದ್ದೇನೆ: ಎಚ್‌ ಡಿಕೆ

ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಉತ್ಸುಕನಾಗಿದ್ದೇನೆ: ಎಚ್‌ ಡಿಕೆ

ಬೆಂಗಳೂರು: ಇಂದು ದೆಹಲಿಯಲ್ಲಿ ಎನ್​ಡಿಎ ಮೈತ್ರಿಕೂಟದ ಮಹತ್ವದ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಕರ್ನಾಟಕ ರಾಜ್ಯದ ಜೆಡಿಎಸ್ ಮುಖ್ಯಸ್ಥ ಹಾಗೂ ನೂತನ ಸಂಸದರಾಗಿ ಆಯ್ಕೆಯಾಗಿರುವ ಎಚ್ ಡಿ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ.

ದೆಹಲಿಗೆ ತೆರಳು ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಸಂಸದನಾಗಿ ನಮ್ಮ ಕರ್ನಾಟಕ ರಾಜ್ಯದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡುತ್ತೇನೆಂದು ಹೇಳಿದ್ದಾರೆ. ಇದನ್ನೂ ಓದಿ: ಎನ್​ಡಿಎ ನಾಯಕರ ಮಹತ್ವದ ಸಭೆ

ಕೇಂದ್ರ ಸರ್ಕಾರಕ್ಕೆ ಯಾವ ಮುಜುಗರವನ್ನೂ ನಾನು ಮಾಡುವುದಿಲ್ಲ. ಮೈತ್ರಿ ಧರ್ಮ ಪಾಲನೆ ಮಾಡುತ್ತೇನೆ. ರಾಜ್ಯದ ಎಲ್ಲಾ ಸಂಸದರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಸಂಸದ ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಉತ್ಸುಕನಾಗಿದ್ದೇನೆ. ಮೈತ್ರಿ ನಿಯಮಗಳನ್ನು ಪಾಲಿಸುತ್ತೇನೆ. ಕರ್ನಾಟಕದ ಸಂಸದರು ರಾಜ್ಯದ ಹಿತದೃಷ್ಟಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

 

Related