ಸಮಾಜ ನಿರ್ಮಿಸಲು ಪ್ರತಿಯೊಬ್ಬರಿಗೂ ದೇಶ ಪ್ರೇಮ ಮೂಡಿಸುವ ಶಿಕ್ಷಣದ ಅಗತ್ಯವಿದೆ : ಬಿ.ಸಿ ನಾಗೇಶ್

ಚಾಮರಾಜಪೇಟೆಯ, ಉದಯ ಬಾನು ಪಬ್ಲಿಕ್ ಶಾಲೆಯ ಆಟದ ಮೈದಾನಲ್ಲಿ ಆಚಾರ್ಯ ನರರತ್ನ ಸುರಿಜಿ ಮಹಾರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡದಾದ ಒಂದೇ ಬಾರಿಗೆ 11 ಮಂದಿ ಬಾಲಕರು ಮತ್ತು ಬಾಲಕಿಯರಿಗೆ ಸನ್ಯಾಸ ಧೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಕೇಂದ್ರ ಸರ್ಕಾರ ಶಿಕ್ಷಣದಲ್ಲಿ ಸಮಗ್ರ ಬದಲಾವಣೆ ತರುತ್ತಿದ್ದು, ರಾಷ್ಟ್ರೀಯವಾದಿ ಸಮಾಜ ನಿರ್ಮಿಸಲು ಪ್ರತಿಯೊಬ್ಬರಿಗೂ ದೇಶ ಪ್ರೇಮ ಮೂಡಿಸುವ ಶಿಕ್ಷಣದ ಅಗತ್ಯವಾಗಿದೆ.

ನಾವು ಬ್ರಿಟಿಷ್ ಮಾದರಿಯ ಶಿಕ್ಷಣ ವ್ಯವಸ್ಥೆಯಿಂದ ಇನ್ನೂ ಮುಕ್ತವಾಗಿಲ್ಲ. ಹೀಗಾಗಿ ಒಂದು ಅಥವಾ ಎರಡನೇ ತರಗತಿಯಲ್ಲಿ ನೈತಿಕ ಶಿಕ್ಷಣದ ಪಾಠಗಳನ್ನು ಅಳವಡಿಸುತ್ತೇವೆ. ಹೀಗಾಗಿ ರಾಷ್ಟ್ರೀಯ ವಾದಿ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಶಿಕ್ಷಣ ವ್ಯವಸ್ಥೆಯನ್ನು ಬದಲಾವಣೆ ಮಾಡದಿದ್ದರೆ ಜನ ಜೀವನದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಪಾದನೆಯಾಗಿದ್ದು, ಇದೇ ಹಾದಿಯಲ್ಲಿ ರಾಜ್ಯ ಸರ್ಕಾರ ಮುನ್ನಡೆಯುತ್ತಿದೆ. ನಮಗೆ ದೇಶದಲ್ಲಿ

Related