ರೈತ, ದಲಿತ ವಿರೋಧಿ ಕಾಂಗ್ರೆಸ್: ವಿಜಯೇಂದ್ರ

ರೈತ, ದಲಿತ ವಿರೋಧಿ ಕಾಂಗ್ರೆಸ್: ವಿಜಯೇಂದ್ರ

ಹಾಸನ: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಕೇವಲ ಲೋಕಸಭಾ ಚುನಾವಣೆಗೆ ಮಾತ್ರವಲ್ಲದೆ ಈ ಮೈತ್ರಿ ಪಕ್ಷಗಳ ಜೀವನದಿದ್ದಕ್ಕೂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಜೆಡಿಎಸ್ ಸಂಸದ ಪ್ರಜ್ವಲ್ ದೇವರಾಜ್ ಅವರು ನಾಮಪತ್ರ ಸಲ್ಲಿಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಮಾತ್ರವಲ್ಲದೆ ಪಕ್ಷದ ಜೀವನ ದೊಡ್ಡಕ್ಕೂ ಈ ಮೈತ್ರಿ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ

ರೈತ, ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ದೇಶದಿಂದ ಕಿತ್ತೊಗೆಯಬೇಕು. ಆ ನಿಟ್ಟಿನಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ.

ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ನಮ್ಮೆಲ್ಲರ ಹಿರಿಯರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡಿರಲಿಲ್ಲ. ಈ ಚುನಾವಣೆಯಲ್ಲಿ ದೇವೇಗೌಡರ ಆಶೀರ್ವಾದ ನಮ್ಮ ಮೇಲಿದೆ ಎಂದು ವಿಜಯೇಂದ್ರ ಹೇಳಿದರು. ಪ್ರಧಾನಿ ಮೋದಿ ಅವರಿಗಾಗಿ ಹೆಚ್ಡಿ ದೇವೇಗೌಡರು ಮೈತ್ರಿ ಮಾಡಿಕೊಂಡಿದ್ದಾರೆ. ದೇವೇಗೌಡರು ಖುದ್ದು ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಹಾಸನ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಗೆಲ್ಲಿಸಲು ನಾವು ಕೆಲಸ ಮಾಡಬೇಕು ಎಂದು ವಿಜಯೇಂದ್ರ ಹೇಳಿದರು.

Related