ರೈತರು ಯಾವುದೇ ಕಾರಣಕ್ಕೂ ಕಂಗಲಾಗುವ ಅವಶ್ಯಕತೆ ಇಲ್ಲ: ಶೋಭಾ ಕರಂದ್ಲಾಜೆ

ರೈತರು ಯಾವುದೇ ಕಾರಣಕ್ಕೂ ಕಂಗಲಾಗುವ ಅವಶ್ಯಕತೆ ಇಲ್ಲ: ಶೋಭಾ ಕರಂದ್ಲಾಜೆ

ಮೈಸೂರು: ದೇಶದಲ್ಲಿ ಮತ್ತು ರಾಜ್ಯದಲ್ಲಿ ರೈತರು ಯಾವುದೇ ಕಾರಣಕ್ಕೂ ಕಂಗಲಾಗುವ ಅವಶ್ಯಕತೆ ಇಲ್ಲಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

ದೇಶದಲ್ಲಿ ಮಾನ್ಸೂನ್ ಬೇಗ ಆರಂಭ ಆಗಬೇಕಿತ್ತು, ತಡವಾಗಿದೆ. ಆದರೂ ರೈತರು ಬಿತ್ತನೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದು, ದೇಶದಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಸೂನ್ ತಡವಾಗಿ ಆರಂಭವಾದರೂ ಬಿತ್ತನೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಬಿ, ಖಾರಿಫ್ ಬೆಳೆಗೆ ಸಂಬಂಧಿಸಿದಂತೆ ಕೇಂದ್ರದ ಕೃಷಿ‌ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಭೆ ಮಾಡಿದೆ. ಯಾವ ರಾಜ್ಯಕ್ಕೆ ಯಾವ ಬಿತ್ತನೆ ಬೀಜ, ರಸಗೊಬ್ಬರ ಬೇಕು ಎಂಬ ಮಾಹಿತಿ ಪಡೆದು ಅದನ್ನು ಪೂರೈಸುವ ಕೆಲಸ ಮಾಡುತ್ತಿದೆ. ಈ ಬಾರಿಯೂ ಮುಂಗಾರಿಗೂ ಮೊದಲು ಎಲ್ಲಾ ರಾಜ್ಯಗಳ ಕೃಷಿ ಇಲಾಖೆಗಳೊಂದಿಗೆ ಸಂಪರ್ಕದಲ್ಲಿದ್ದು, ಸಭೆ ನಡೆಸಿ ಆಯಾ ರಾಜ್ಯಕ್ಕೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು.

 

Related