ಮೋದಿಗೆ ರಕ್ತದಲ್ಲಿ ಪತ್ರ ಬರೆದ ರೈತರು

ಮೋದಿಗೆ ರಕ್ತದಲ್ಲಿ ಪತ್ರ ಬರೆದ  ರೈತರು

ದಾವಣಗೆರೆ : ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಮತ್ತೊಮ್ಮೆ ಬೀದಿಗಿಳಿದು ಹೋರಾಟ ನಡೆಸಿದ್ದು, ಹೆದ್ದಾರಿ ತಡೆಗೆ ಮುಂದಾಗಿದ್ದಾರೆ.
ಈ ನಡುವೆ ವಿವಿಧೆಡೆಗಳಲ್ಲಿ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಕೇಂದ್ರ ಕೃಷಿ ಕಾಯ್ದೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅನ್ನದಾತರು ಈ ಪತ್ರವನ್ನು ಪ್ರಧಾನಿಗೆ ಪೋಸ್ಟ್ ಮಾಡಿದ್ದಾರೆ.

ಇನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಹೆದ್ದಾರಿ ತಡೆ ನಡೆಸುತ್ತಿರುವ ರೈತರು ಕುರಿ, ಕೋಳಿ, ದನ ಕರುಗಳ ಸಮೇತವಾಗಿ ಹೆದ್ದಾರಿಗೆ ಬಂದು ಪ್ರತಿಭಟನೆ ನಡೆಸಿದ್ದಾರೆ.

Related