ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಮಹಾನಟಿ ರಿಯಾಲಿಟಿ ಶೋ ಅತ್ಯುತ್ತಮ ಜನಪ್ರಿಯತೆ ಪಡೆಯುತ್ತಿದ್ದು, ಈಗ ಈ ಮಹಾನಟಿ ಶೋ ಗೆ ಒಂದು ಕಪ್ಪು ಅಡ್ಡ ಬಂದಂತಾಗಿದೆ.
ಹೌದು, ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಮಹಾ ನಟಿ ರಿಯಾಲಿಟಿ ಶೋ ವಿರುದ್ಧ ದೂರು ದಾಖಲಿಸಲಾಗಿದೆ. ಮಹಾನಟಿ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ಮದುವೆಯಾದರೆ ಕೇವಲ ಗ್ರೀಸ್ ತಿಂದು ಬದುಕಬೇಕಾಗುತ್ತದೆ ಎಂಬ ಪದ ಬಳಕೆಗೆ ವಿರುದ್ಧ ಕೇಸ್ ದಾಖಲಾಗಿದೆ ಎಂಬ ಮಾಹಿತಿ ಹೊರ ಬಿದ್ದಿದೆ.
ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆ ಹುಟ್ಟುಹಾಕಿದೆ. ‘ಮೆಕ್ಯಾನಿಕ್ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಇದನ್ನೂ ಓದಿ: ಬೈರತಿ ಬಸವರಾಜ್ ಕಾರು ಅಪಘಾತ
ಮೆಕ್ಯಾನಿಕ್ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯದ ಬಗ್ಗೆ ಆಕ್ಷೇಪ ಕೇಳಿ ಬಂದಿದೆ. ಅಲ್ಲದೇ, ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.
ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ಜಡ್ಜ್ಗಳಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.