ಕುಸುಮಾ ವಿರುದ್ಧ ಎಫ್‌ಐಆರ್ : ಡಿಕೆಶಿ ಗರಂ

ಕುಸುಮಾ ವಿರುದ್ಧ ಎಫ್‌ಐಆರ್ : ಡಿಕೆಶಿ ಗರಂ

ಬೆಂಗಳೂರು : ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ರ‍್ಥಿ ಕುಸುಮಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ಸಿಬ್ಬಂದಿ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದಾಶಿವ ನಗರದ ನಿವಾಸದಲ್ಲಿ ಇಂದು ತುರ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್‌ಆರ್ ನಗರದ ನಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಹೇಡಿತನ, ನೀಚತನದ ರಾಜಕಾರಣವಾಗಿದೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ನಾವು ಸಹಿಸುವುದಿಲ್ಲ ಎಂದರು.

ಈ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿರುವ ಡಿಕೆಶಿ, ಎಫ್‌ಐಆರ್ ಪ್ರಕರಣದ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಚುನಾವಣಾ ಆಯೋಗಕ್ಕೂ ದೂರು ನೀಡಲಿದ್ದೇವೆ ಎಂದು ತಿಳಿಸಿದರು.

Related