ಬಿಬಿಎಂಪಿ ಕೇಂದ್ರ ಕಛೇರಿ ಮುಂಬಾಗ ನೆರವೇರಿದ ಧ್ವಜಾರೋಹಣ

ಬಿಬಿಎಂಪಿ ಕೇಂದ್ರ ಕಛೇರಿ ಮುಂಬಾಗ ನೆರವೇರಿದ ಧ್ವಜಾರೋಹಣ

ಬೆಂಗಳೂರು: 77ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಧ್ವಜಾರೋಹಣ ನೆರವೇರಿಸಿದರು.

ಇದೇ ವೇಳೆ ಪಾಲಿಕೆ ಕೇಂದ್ರ ಕಛೇರಿ ಮುಂಬಾಗ “ನನ್ನ ಮಣ್ಣು ನನ್ನ ದೇಶ” ಅಭಿಯಾನದ ಅಂಗವಾಗಿ ದೇಶಕ್ಕಾಗಿ ಹುತಾತ್ಮ ಯೋಧರ ಗೌರವಾರ್ಥ ಸ್ಥಾಪಿಸಿರುವಂತಹ ಶಿಲಾಫಲಕದ ಮುಂಭಾಗ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದವರೆಲ್ಲರೂ ಕೈಯಲ್ಲಿ ಮೃತ್ತಿಕೆ(ಮಣ್ಣು) ಹಿಡಿದು ಪ‌ಂಚ ಪ್ರಾಣ್ ಶಪಥ ತೆಗೆದುಕೊಳ್ಳಲಾಯಿತು.

ಈ ವೇಳೆ ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಡಾ. ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಪ್ರೀತಿ ಗೆಹ್ಲೋಟ್, ಉಪ ಆಯುಕ್ತರಾದ ಮಂಜುನಾಥ್ ಸ್ವಾಮಿ, ಸಹಾಯಕ ಆಯುಕ್ತರಾದ ಅಜಯ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related