ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಕ್ಲಿನಿಕ್ ಗಳು ಸೀಜ್!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಕ್ಲಿನಿಕ್ ಗಳು ಸೀಜ್!

ಬೆಂಗಳೂರು: ಇಡೀ ರಾಜ್ಯವೇ ಬೆರಗಾಗುವಂತೆ ಮಂಡ್ಯ ಜಿಲ್ಲೆಯಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬಾರಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಮತ್ತೆ ರಾಜ್ಯದ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭ್ರೂಣ ಲಿಂಗಪತ್ತೆ ಮತ್ತು ಹತ್ಯೆಯ ಪ್ರಕಾರಗಳು ಬೆಳಕಿಗೆ ಬಂದಿದ್ದು ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿ ಕ್ಲೀನಿಂಗ್ ಗಳನ್ನು ಸೀಜ್ ಮಾಡಿದ್ದಾರೆ.

ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆರೋಗ್ಯ ಇಲಾಖೆಯಿಂದ ದಾಳಿ ನಡೆಸಿದ್ದಾರೆ. ಈ ವೇಳೆ ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ದೇವನಹಳ್ಳಿಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳ ಮೇಲೆ ದಾಳಿ ನಡೆದಿದ್ದು, ನೆಲಮಂಗಲದಲ್ಲಿ 5 ಕ್ಲಿನಿಕ್, ದೊಡ್ಡಬಳ್ಳಾಪುರದ ಒಂದು ಕ್ಲಿನಿಕ್ ಸೀಜ್ ಮಾಡಲಾಗಿದೆ. ಇವು ಪರವಾನಿಗೆ ಇಲ್ಲದೇ ನಡೆಸುತ್ತಿದ್ದ ಕ್ಲಿನಿಕ್​ಗಳಾಗಿದ್ದರಿದ ಅರ್ಧಧಿಕಾರಿಗಳು ಅದನ್ನು ಬಂದ್ ಮಾಡಿಸಿದ್ದಾರೆ. ಇದೇ ವೇಳೆ ಭ್ರೂಣ ಪತ್ತೆ ಮಾಡುತ್ತಿದ್ದ ಆಸ್ಪತ್ರೆ ಮೇಲೆಯೂ ದಾಳಿ ನಡೆದಿದೆ.

ಹೊಸಕೋಟೆ ತಾಲೂಕಿನ ಚನ್ನಸಂದ್ರದ ಎಸ್ ಪಿಜಿ ಆಸ್ಪತ್ರೆಯಲ್ಲಿ ದಾಳಿ ವೇಳೆ ಒಂದು ಭ್ರೂಣ ಪತ್ತೆಯಾಗಿದೆ. ಭ್ರೂಣ ಪತ್ತೆಯಾಗ್ತಿದ್ದಂತೆ ಆಸ್ಪತ್ರೆಯ ಮಾಲೀಕ‌ ಎಸ್ಕೇಪ್ ಆಗಿದ್ದಾರೆ. ಈ ಬಗ್ಗೆ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಗೆ ವೈಧ್ಯಧಿಕಾರಿಗಳು ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಆಸ್ಪತ್ರೆಯ ಮೂವರು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಿದ್ದಾರೆ.

 

Related