ವಿಷಾದ ವ್ಯಕ್ತಪಡಿಸಿದ ಮಾಜಿ ಸಿಎಂ

ವಿಷಾದ ವ್ಯಕ್ತಪಡಿಸಿದ ಮಾಜಿ ಸಿಎಂ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಹಣ ಲೂಟಿಯಾಗುತ್ತಿದೆ ಮತ್ತು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದ ರಾಜ್ಯದಲ್ಲಿರುವ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಮಾತನ್ನು ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದರು.

ಇದೀಗ ಈ ಮಾತಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಷದ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾರಿ ತಪ್ಪುವುದು ಎಂಬ ಪದ ಅಶ್ಲೀಲನಾ? ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೇನೆ ಎಂದು ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ತಮ್ಮ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದರು. ತುಮಕೂರಿನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದಾಗ, ಹಲವಾರು ವಿಚಾರ ಪ್ರಸ್ತಾಪ ಮಾಡಿದೆ. ಈ ಸಂದರ್ಭದಲ್ಲಿ ನಾನು ನಾಡಿನ ಮಹಿಳೆಯರಿಗೆ ಅಪಮಾನ ಮಾಡಿದ್ದೇನೆ ಅಂತ ಕಾಂಗ್ರೆಸ್​ನವರು ಆರೋಪ ಮಾಡುತ್ತಿದ್ದಾರೆ.

ಪಿಕ್​ ಪಾಕೆಟ್ ಮಾಡಿ, ಗ್ಯಾರಂಟಿ ಎರಡು ಸಾವಿರ ಕೊಟ್ಟಿದ್ದಾರೆ. ಅದಕ್ಕೆ ದಾರಿ ತಪ್ಪಬೇಡಿ ಅಂತ ಹೇಳಿದ್ದೇನೆ. ನನ್ನ ಅವಧಿಯಲ್ಲಿ ಸಾರಾಯಿ ನಿಷೇಧ ಮಾಡಿದೆ. ಮಹಿಳೆಯರಿಗೆ ಗೌರವ ಕೊಡಲು ನಾನು ಸಾರಾಯಿ ನಿಷೇಧ ಮಾಡಿದ್ದು ತಪ್ಪಾ. ಹೌದು, ನಾನು ದಾರಿತಪ್ಪಿದ್ದೆ, ಅದನ್ನು ಈ ಹಿಂದೆಯೇ ಸದನದಲ್ಲೇ ಹೇಳಿದ್ದೇನೆ. ನನ್ನ ಪತ್ನಿ ನನ್ನನ್ನು ತಿದ್ದಿದ್ದಾಳೆ ಎಂದರು.

 

Related