‘ಮತ್ತೊಮ್ಮೆ ಮೋದಿ 2024’ ಅಭಿಯಾನಕ್ಕೆ ಮಾಜಿ ಸಿಎಂ ಚಾಲನೆ

‘ಮತ್ತೊಮ್ಮೆ ಮೋದಿ 2024’ ಅಭಿಯಾನಕ್ಕೆ ಮಾಜಿ ಸಿಎಂ ಚಾಲನೆ

ಮೈಸೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳಗಳು ಬಾಕಿ ಇದ್ದು, ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅಧಿಕಾರ ಹಿಡಿಯಬೇಕೆಂದು ರಾಜ್ಯದ ಬಿಜೆಪಿ ನಾಯಕರು ಮತ್ತೊಮ್ಮೆ ಮೋದಿ 2024 ಎಂಬ ಅಭಿಯಾನಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ಗೋಡೆಯ ಮೇಲೆ ಬಣ್ಣ ಹಚ್ಚುತ್ತ ದೀಪ ಬೆಳಗಿಸುತ್ತ ಮತ್ತೊಮ್ಮೆ ಮೋದಿ 2024 ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಚಾಮರಾಜ ಕ್ಷೇತ್ರದ ಪಡುವಾರಹಳ್ಳಿಯಲ್ಲಿ ಮತ್ತೊಮ್ಮೆ ಮೋದಿ 2024 ಎಂಬ ಗೋಡೆ ಬರಹ ದೀಪಕ್ಕೆ ಬಣ್ಣ ಹಚ್ಚುವ ಮೂಲಕ ಅಭಿಯಾನಕ್ಕೆ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಮಾಜಿ ಶಾಸಕರಾದ ಎಲ್ ನಾಗೇಂದ್ರ, ಎನ್ ಮಹೇಶ್, ರಾಜ್ಯ ಉಪಾಧ್ಯಕ್ಷ ಎಂ ರಾಜೇಂದ್ರ, ಬಿಜೆಪಿ ಮುಖಂಡ ಕವೀಶ್ ಗೌಡ ಸೇರಿದಂತೆ ಹಲವರು ಇದ್ದರು.

Related