ಮಾಜಿ ಮೇಯರ್ ಆಸ್ಪತ್ರೆಯಿಂದ ಪರಾರಿ!

ಮಾಜಿ ಮೇಯರ್ ಆಸ್ಪತ್ರೆಯಿಂದ ಪರಾರಿ!

ಬೆಂಗಳೂರು : ಆಸ್ಪತ್ರೆಯಿಂದ ಪರಾರಿಯಾಗಿರುವ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ಅವರ ಪತ್ತೆಗೆ ಸಿಸಿಬಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.

ಬಂಧನ ಭೀತಿ ಎದುರಿಸುತ್ತಿರುವ ಸಂಪತ್ ರಾಜ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು, ಹೊರ ರಾಜ್ಯಕ್ಕೆ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಸಂಪತ್ ರಾಜ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಕುಟುಂಬದವರನ್ನು ಪತ್ತೆ ಹಚ್ಚುವ ಪ್ರಯತ್ನ ಕೂಡ ವಿಫಲವಾಗಿದೆ. ಆದರೆ ಸಂಪತ್ ರಾಜ್ ಇರುವಿಕೆಯ ಬಗ್ಗೆ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಅವರನ್ನು ಶೀಘ್ರವೇ ಬಂಧಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.

Related