ಕಲಬುರಗಿ : ಜಿಲ್ಲೆಯಲ್ಲಿ ಪೊಲೀಸ್ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರುತ್ತಿದ್ದಂತೆ ರಾಷ್ಟ್ರಗೀತೆ ಹಾಗೂ ರೈತಗೀತೆ ಹಾಡಲಾಯಿತು. ಸಚಿವರು ಕವಾಯತು ತಂಡಗಳ ಪರಿವೀಕ್ಷಣೆ ಮಾಡಿದರು. ವಿವಿಧ ಇಲಾಖೆಗಳಿಂದ ಸ್ಥಬ್ಧಚಿತ್ರಗಳ ಪ್ರದರ್ಶನ ನಡೆಯಿತು.